Advertisement

‘ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’: ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ಬೆದರಿಕೆ

10:13 PM Mar 19, 2022 | Team Udayavani |

ಚೆನ್ನೈ: “ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ತಮಿಳುನಾಡಿನ ಇಸ್ಲಾಮಿಕ್‌ ಸಂಘಟನೆಯೊಂದು ಬಹಿರಂಗವಾಗಿಯೇ ಕೊಲೆ ಬೆದರಿಕೆ ಹಾಕಿದೆ.

Advertisement

ಮಧುರೆಯಲ್ಲಿ  ನಡೆದ ಪ್ರತಿಭಟನೆಯಲ್ಲಿ ತಮಿಳುನಾಡು ತೌಹೀದ್‌ ಜಮಾತ್‌(ಟಿಎನ್‌ಟಿಜೆ) ಸಂಘಟನೆಯ ನಾಯಕ ಕೊವಾಯಿ ಆರ್‌. ರೆಹಮತುಲ್ಲಾ, “ಮುಂದೊಂದು ದಿನ ಹಿಜಾಬ್‌ ತೀರ್ಪು ಕೊಟ್ಟ ಆ ನ್ಯಾಯಮೂರ್ತಿಗಳಿಗೆ ಏನಾದರೂ ಆದರೆ, ಅದಕ್ಕೆ ಅವರೇ ಹೊಣೆಗಾರರು ಹೊರತು ನಾವಲ್ಲ’ ಎಂದು ಹೇಳಿದ್ದರು. ಹಾಗೆಯೇ ಈ ರೀತಿ ಬೆದರಿಕೆ ಹಾಕಿದ್ದಕ್ಕೆ ನಮ್ಮನ್ನು ಜೈಲಿಗೆ ಹಾಕುವುದಾದರೆ ಅದನ್ನು ನಾವು “ಹಿಜಾಬ್‌ಗಾಗಿ ಹೋರಾಡಿ ಜೈಲಿಗೆ ಹೋದದ್ದು’ ಎಂದು ಪರಿಗಣಿಸುತ್ತೇವೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ರೆಹಮತುಲ್ಲಾ, ಟಿಎನ್‌ಟಿಜೆ ಮಧುರೆ ಜಿಲ್ಲಾ ನಾಯಕ ಅಸಾನ್‌ ಬಾತ್‌ಶಾ ಹಾಗೂ ಉಪ ಕಾರ್ಯದರ್ಶಿ ಹಬೀಬುಲ್ಲಾ  ವಿರುದ್ಧ ಐಪಿಸಿಯ 5 ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಮೂವರೂ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next