Advertisement

ಮೂವರು ಉಗ್ರರ ಎನ್‌ಕೌಂಟರ್‌

12:30 AM Jan 23, 2019 | |

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ವಿಶೇಷವೆಂದರೆ, ಹತ ಉಗ್ರರ ಪೈಕಿ ಒಬ್ಟಾತ ಕಣಿವೆ ರಾಜ್ಯದ ಐಪಿಎಸ್‌ ಅಧಿಕಾರಿಯೊಬ್ಬರ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಇಲ್ಲಿನ ಹೆಫ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧಾರದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಉಗ್ರರು ಏಕಾಏಕಿ ಭದ್ರತಾಪಡೆ ಮೇಲೆ ಗುಂಡು ಹಾರಿಸತೊಡಗಿದರು. ಸುಮಾರು 7 ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆ ಸದೆಬಡಿಯಿತು. ಜತೆಗೆ, ಘಟನಾ ಸ್ಥಳದಿಂದ ಭಾರೀ ಶಸ್ತ್ರಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದೆ. ಐಪಿಎಸ್‌ ಅಧಿಕಾರಿಯ ಸಹೋದರ ಶಂಶುಲ್‌ ಹಖ್‌ನನ್ನು ಮುಖ್ಯವಾಹಿನಿಗೆ ಕರೆತರಲು ಕುಟುಂಬ ಸದಸ್ಯರು ಎಷ್ಟೇ ಪ್ರಯತ್ನಿಸಿದರೂ ಅದು ಯಶಸ್ವಿಯಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ರಕರ್ತರಿಗೂ ಗಾಯ: ಎನ್‌ಕೌಂಟರ್‌ ಮುಗಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಭದ್ರತಾ ಪಡೆ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪೆಲ್ಲೆಟ್‌ ಬಳಕೆ ಮಾಡಲಾಗಿದ್ದು, ಐವರು ಪತ್ರಕರ್ತರೂ ಗಾಯಗೊಂಡಿದ್ದಾರೆ. ಪತ್ರಕರ್ತರ ಮೇಲಿನ ದಾಳಿಗೆ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

12 ಜಿಲ್ಲೆಗಳಲ್ಲಿ: ಕಳೆದ ವರ್ಷ ಕಣಿವೆ ರಾಜ್ಯದ 22 ಜಿಲ್ಲೆಗಳ ಪೈಕಿ 12ರಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಎನ್‌ಕೌಂಟರ್‌ಗಳು ನಡೆದಿದ್ದು, ಒಟ್ಟು 52 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next