Advertisement

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

03:00 PM May 07, 2024 | Team Udayavani |

ಶ್ರೀನಗರ: ಭದ್ರತಾ ಪದೇ ಹಾಗೂ ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಮಂಗಳವಾರ ನಡೆದಿದೆ.

Advertisement

ಮಾಹಿತಿಯ ಪ್ರಕಾರ, ಗುಪ್ತಚರ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಸೇನಾ ಸಿಬ್ಬಂದಿ ಕುಲ್ಗಾಮ್‌ನ ರೆಡ್ವಾನಿ ಪೈನ್ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಈ ವೇಳೆ ಅಲ್ಲಿ ಅಡಗಿ ಕುಳಿತಿದ್ದ ಉಗ್ರರು ಸೇನಾ ತಂಡದ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಇದಾದ ಬಳಿಕ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿವೆ.

ಕಾಶ್ಮೀರದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿರುವ ಸಮಯದಲ್ಲಿ ಕುಲ್ಗಾಮ್‌ನಲ್ಲಿ ನಡೆದ ಈ ಎನ್‌ಕೌಂಟರ್ ತೀವ್ರ ಸಂಚಲನ ಮೂಡಿಸಿದೆ. ಶ್ರೀನಗರ ಸಂಸದೀಯ ಸ್ಥಾನಕ್ಕೆ ಮೇ 13 ರಂದು ಮತದಾನ ನಡೆಯಲಿದ್ದು, ಬಾರಾಮುಲ್ಲಾ ಮತ್ತು ಅನಂತನಾಗ್-ರಜೌರಿ ಸ್ಥಾನಗಳಿಗೆ ಕ್ರಮವಾಗಿ ಮೇ 20 ಮತ್ತು 25 ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Advertisement

Udayavani is now on Telegram. Click here to join our channel and stay updated with the latest news.

Next