Advertisement

3 ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತ: ಸಿಎಂ

07:20 AM May 14, 2020 | Lakshmi GovindaRaj |

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಥಿಕ ಪುನಶ್ಚೇತನಕ್ಕಾಗಿ 20 ಲಕ್ಷ ಕೋಟಿಗಳ ಪ್ಯಾಕೇಜ್‌ ಘೋಷಿಸಿದ್ದರ ಅನುಗುಣ ವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೂರು ಲಕ್ಷ ಕೋಟಿ ಹಣಕಾಸು ನೆರವನ್ನು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಸಹಾಯ ಹಸ್ತ ಚಾಚಿದ್ದು ಶ್ಲಾಘನೀಯ. ಇಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಪತ್ರಿಕಾ ಹೇಳಿಕೆ ನೀಡಿ, ಮೂರು ಲಕ್ಷ ಕೋಟಿ  ಹಣಕಾಸು ಸಹಾಯ ಕೇವಲ ಆರ್ಥಿಕ ಸಹಾಯವಾಗಿರದೆ ದೇಶದ ಉದ್ಯಮಿಗಳಿಗೆ ಮತ್ತು ಕಾರ್ಮಿಕ ವರ್ಗಕ್ಕೆ ಆರ್ಥಿಕವಾಗಿ ಪುನಶ್ಚೇತನಗೊಳ್ಳು ವಲ್ಲಿ ವರದಾನವಾಗಲಿದೆ ಎಂದಿದ್ದಾರೆ. ಇಂದಿನ ಆರ್ಥಿಕ ಪುನಶ್ಚೇತನ, ಸಮಯೋಚಿತ  ಮತ್ತು ವೈಜ್ಞಾನಿಕವಾಗಿದ್ದು, ಆರ್ಥಿಕ ನೈಪುಣ್ಯತೆ ಯಿಂದ ಕೂಡಿದೆ. ಲಾಕ್‌ ಡೌನ್‌ ವ್ಯವಸ್ಥೆಯಿಂದ ಹೊರಬಂದು ಜನತೆ ನಿತ್ಯದ ದುಡಿಮೆ ಪ್ರಾರಂಭಿಸಲು ಪ್ರೇರೇಪಿಸಿದ ಮೊದಲ ದಿಟ್ಟ ಹೆಜ್ಜೆ ಇದಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next