Advertisement

ಛತ್ತೀಸ್‌ಗಢ ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಲೀಕ್‌ : ಮೂವರ ಸಾವು

12:29 PM Dec 17, 2018 | Team Udayavani |

ಕೋರ್ಬಾ : ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯಲ್ಲಿನ ಸೌತ್‌ ಈಸ್ಟರ್ನ್ ಕೋಲ್‌ ಫೀಲ್ಡ್‌ ಲಿಮಿಟೆಡ್‌ (ಎಸ್‌ಇಸಿಎಲ್‌) ನ ಭೂಗತ ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಲೀಕ್‌ ಸಂಭವಿಸಿ ಮೂವರು ಕಾರ್ಮಿಕರು ದಾರುಣವಾಗಿ ಮೃತಪಟ್ಟ  ಘಟನೆ ವರದಿಯಾಗಿದೆ.

Advertisement

ಕೋಲ್‌ ಇಂಡಿಯಾ ಕಂಪೆನಿಯ ಸಹ ಸಂಸ್ಥೆಯಾಗಿರುವ ಎಸ್‌ಇಸಿಎಲ್‌ನ ಬಾಗ್‌ದೇವಾ ಕೋಲ್‌ ಮೈನ್ಸ್‌ನಲ್ಲಿ ಈ ದುರ್ಘ‌ಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಛತ್ತೀಸ್‌ಗಢದ ನಿಯೋಜಿತ ಮುಖ್ಯಮಂತ್ರಿ ಭೂಪೇಶ್‌ ಭಾಗೇಲ್‌ ಅವರು ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದು ಮೃತಪಟ್ಟಿರುವ ಮೂವರು ಕಾರ್ಮಿಕರ ಕುಟುಂಬಕ್ಕೆ ತಲಾ 75,000 ರೂ. ಪರಿಹಾರ ಘೋಷಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next