Advertisement

ಜ್ಯೂಸ್ ಅಂತ ತಿಳಿದು ಕಳೆನಾಶಕ ಕುಡಿದು ಮಗು ಸಾವು

10:48 AM Nov 12, 2019 | keerthan |

ಚಿಕ್ಕಮಗಳೂರು: ಜ್ಯೂಸ್ ಎಂದು ತಿಳಿದು ಕಳೆನಾಶಕವನ್ನು ಕುಡಿದು ಮಗುವೊಂದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.

Advertisement

ಪ್ರವೀಣ್-ಪೂಜಿತ ದಂಪತಿಯ ಪುತ್ರ ಅಗಸ್ತ್ಯ (3) ಸಾವನ್ನಪ್ಪಿದ್ದ ಮಗು.

ಕಳೆದ ಅಕ್ಟೋಬರ್ 24ರಂದು ಕಳೆನಾಶಕ ಸೇವಿಸಿದ್ದ ಮಗು ಅಗಸ್ತ್ಯ 18 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.

ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next