Advertisement

ಬಂಟ್ವಾಳ : ಮೂವರು ಯುವಕರಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ 

09:49 AM Dec 12, 2018 | |

ಬಂಟ್ವಾಳ: ತಾಲೂಕಿನ ಕೈಕಂಬ ಬಳಿ ಮೂವರು ಯುವಕರಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದ ಆತಂಕಕಾರಿ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ವರದಿಯಾದಂತೆ ಅನ್ಸಾರ್‌, ಸರ್ಫಾನ್‌ ಮತ್ತು ಫ‌ಯಾಜ್‌ ಎನ್ನುವ ಮೂವರು ಯುವಕರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. 

ಮೂವರನ್ನು ಬಂಟ್ವಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ವೈಯಕ್ತಿಕ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಸ್ಪಷ್ಟವಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next