Advertisement

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

03:26 PM Jul 07, 2024 | Team Udayavani |

ಜೈಪುರ: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

Advertisement

ಶನಿವಾರ ರಾತ್ರಿ 9:30ರ ಸಮಯದಲ್ಲಿ ಕಾರಿನಲ್ಲಿ ಯೂಟ್ಯೂಬರ್‌ ಗಳಾದ ತರುಣ್, ಹರ್ಷ್ ಮತ್ತು ಹಿಮಾಂಶು ಜೊತೆಯಾಗಿ ಹೋಗುತ್ತಿದ್ದರು. ಈ ಮೂವರು ಯೂಟ್ಯೂಬ್‌ ನಲ್ಲಿ ಗೇಮಿಂಗ್‌ ಹಾಗೂ ಟ್ರೇಡಿಂಗ್‌ ಸಂಬಂಧಿತ ವಿಡಿಯೋಗಳನ್ನು ಮಾಡುತ್ತಿದ್ದರು. ಇದರಿಂದ ಇವರಿಗೆ ಒಳ್ಳೆಯ ಆದಾಯ ಬರುತ್ತಿತ್ತು.

ಈ ವಿಚಾರವನ್ನು ಅರಿತ ಅಪಹರಣಕಾರರು ಯೂಟ್ಯೂಬರ್‌ ಗಳು ಹೋಗುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ. ಎರಡು ಕಾರಿನಲ್ಲಿ ಬಂದ ಅಪಹರಣಕಾರರು ಕಾರಿನಿಂದ ಇಳಿದು ಕಾರಿನ ಮೇಲೆ ದಾಳಿ ಮಾಡಿ, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಕಾರಿನೊಳಗೆ ಕೂರಿಸಿಕೊಂಡು ಹೋಗಿದ್ದಾರೆ.

ಈ ಘಟನೆಯ ವಿಡಿಯೋ ಕಟ್ಟಡವೊಂದರಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಹರಣವಾದ 3 ಗಂಟೆಯಲ್ಲಿ ಪೊಲೀಸರು ಆರೋಪಿಗಳಾದ ವಿಕ್ರಮ್ ಸಿಂಗ್ ಮತ್ತು ರಿಷಬ್ ಚೌಧರಿಯನ್ನು ಬಂಧಿಸಿ, ಮೂವರು ಯೂಟ್ಯೂಬರ್‌ ಗಳನ್ನು ರಕ್ಷಿಸಿದ್ದಾರೆ.

ಆರೋಪಿಗಳು ಯೂಟ್ಯೂಬರ್‌ ಗಳನ್ನು ಬೆದರಿಸಿ ಅವರ ಖಾತೆಯಿಂದ ತಮ್ಮ ಖಾತೆಗೆ ಆನ್‌ ಲೈನ್‌ ಮೂಲಕ 3 ಲಕ್ಷ ರೂಪಾಯಿಯನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇತರೆ ಆರೋಪಿಗಳನ್ನು ಪತ್ತೆಗೆ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next