ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಪ್ರವಾಹ ಮತ್ತು ಪ್ರಾಕೃತಿಕ ವಿಕೋಪದಿಂದ ಸುಮಾರು 30 ಕೋ.ರೂ. ನಷ್ಟ ಉಂಟಾಗಿದ್ದು, ಇದಕ್ಕೆ ಸೂಕ್ತ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ಸೋಮವಾರ ಮನವಿ ನೀಡಲಾಯಿತು.
ಮಳೆ ಹಾನಿ ಪರಿಶೀಲನೆಗೆ ದ.ಕ. ಜಿಲ್ಲಾ ಪ್ರವಾಸ ನಡೆಸಿದ ಮುಖ್ಯಮಂತ್ರಿಗಳು ಧರ್ಮಸ್ಥಳದಿಂದ ಹಿಂದಿರುಗುವ ವೇಳೆ ಬಂಟ್ವಾಳ ಬೈಪಾಸ್ ಜಂಕ್ಷನ್ನಲ್ಲಿ ಬಿಜೆಪಿಯ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಅವರನ್ನು ಸ್ವಾಗತಿಸಿ ಮನವಿ ಸಲ್ಲಿಸಿದರು.
ಶಾಸಕ ರಾಜೇಶ್ ನಾೖಕ್ ಮಾತನಾಡಿ, ಬಂಟ್ವಾಳದ ಹಾನಿಯ ಕುರಿತಂತೆ ಸಂಪೂರ್ಣ ದಾಖಲೆಗಳನ್ನೊಳಗೊಂಡು 30 ಕೋ.ರೂ. ಪರಿಹಾರ ಮೊತ್ತದ ಬೇಡಿಕೆ ಸಲ್ಲಿಸಲಾಗಿದೆ. ಜತೆಗೆ ನೆರೆಯಿಂದ ಹಾನಿಯಾದ ಸಣ್ಣಪುಟ್ಟ ಅಂಗಡಿಯವರಿಗೂ ಪರಿಹಾರ ನೀಡಲು ಮನವಿಯಲ್ಲಿ ತಿಳಿಸಲಾಗಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮಾಜಿ ಶಾಸಕ ರುಕ್ಮಯ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಪ್ರಮುಖರಾದ ಎ. ಗೋವಿಂದ ಪ್ರಭು, ಪ್ರಕಾಶ್ ಅಂಚನ್, ಉದಯ ಕುಮಾರ್ ರಾವ್, ದಿನೇಶ್ ಅಮೂrರು ಮೊದಲಾದವರು ಮುಖ್ಯಮಂತ್ರಿಗಳ ಜತೆಗಿದ್ದರು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಸಹಿತ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.