Advertisement

Bengaluru ಸ್ಫೋಟದ ಶಂಕಿತನಿಗೆ 30 ದಿನ ನ್ಯಾಯಾಂಗ ಬಂಧನ

08:50 AM Apr 04, 2024 | Team Udayavani |

ಬೆಂಗಳೂರು: ಕುಂದಲಹಳ್ಳಿಯ ರಾಮೇ ಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಬಂಧಿಸಿರುವ ಮುಜಾಮೀಲ್‌ ಷರೀಫ್ ನ ಎನ್‌ಐಎ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಬುಧವಾರ ಆತನನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿದ್ದು, ಶಂಕಿತನನ್ನು 30 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

ಮಾ.28ರಂದು ಮುಜಾಮೀಲ್‌ ಷರೀಫ್ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿ, ಸೆಷನ್ಸ್‌ ಕೋರ್ಟ್‌ ಆವರಣದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಶಂಕಿತ ವ್ಯಕ್ತಿ, ಪ್ರಮುಖ ಬಾಂಬರ್‌ ಮುಸಾವೀರ್‌ ಹುಸೇನ್‌ ಶಬೀಬ್‌ ಹಾಗೂ ಸೂತ್ರದಾರ ಅಬ್ದುಲ್‌ ಮತೀನ್‌ ತಾಹಾನ ಸೂಚನೆ ಮೇರೆಗೆ ಸ್ಫೋಟಕ್ಕೆ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡಿದ್ದಾನೆ. ಹೀಗಾಗಿ ಆತನನ್ನು 10 ದಿನಗಳ ಕಾಲ ವಶಕ್ಕೆ ಪಡೆಯಬೇಕು ಎಂದು ಕೋರಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌ 7 ದಿನ ವಶಕ್ಕೆ ನೀಡಿತ್ತು. ಬುಧವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಶಂಕಿತ ನನ್ನು ವಿಚಾರಣಾ ಸ್ಥಳ ದಿಂದಲೇ ವಿಡಿಯೋ ಕಾನ್ಫ ರೆನ್ಸ್‌ ಮೂಲಕ ಕೋರ್ಟ್‌ ಗೆ ಹಾಜರು ಪಡಿಸಲಾಗಿತ್ತು. ಬಳಿಕ ವಿಚಾರಣೆ ನಡೆಸಿದ ಕೋರ್ಟ್‌ ಆತನಿಗೆ 30 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಮೂಲಗಳು ತಿಳಿಸಿವೆ.

ವಿಚಾರಣೆಗೆ ನಿರಾಕರಣೆ:ಶಂಕಿತನ ವಿಚಾರಣೆಯಲ್ಲಿ ಅಬ್ದುಲ್‌ ಮತೀನ್‌ ತಾಹಾನ ಸೂಚನೆ ಮೇರೆಗೆ ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಸ್ಫೋಟಕ್ಕೆ ಸಂಚು ರೂಪಿಸಿದ್ದ ಎಂಬುದು ಗೊತ್ತಾಗಿದೆ. ಈ ಹಿಂದೆ ನಡೆದ ಶಿವಮೊಗ್ಗ ಪ್ರಾಯೋಗಿಕ ಸ್ಫೋಟ ಹಾಗೂ ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಶಂಕಿತ ಸಹಾಯ ಮಾಡಿದ್ದಾನೆ. ಅದಕ್ಕಾಗಿ ತಲೆಮರೆಸಿಕೊಂಡಿ ರುವ ಇಬ್ಬರು ಶಂಕಿತರಿಂದ ಆರ್ಥಿಕ ಸಹಾಯ ಪಡೆದುಕೊಂಡಿದ್ದಾನೆ. ಅದಕ್ಕೆ ಪೂರಕ ಸಾಕ್ಷ್ಯಗಳು ದೊರೆತಿವೆ. ಆದರೆ, ಶಂಕಿತ ಮಾತ್ರ, ಅಬ್ದುಲ್‌ ಮತೀನ್‌, ಮುಸಾವೀರ್‌ ಹುಸೇನ್‌ ಎಲ್ಲಿದ್ದಾರೆ ಎಂಬ ಮಾಹಿತಿ ನೀಡುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next