Advertisement

ಸರಕಾರಿ ಸಾರಿಗೆ ಇಲಾಖೆ ಚಾಲಕ,ನಿರ್ವಾಹಕರಿಗೂ 30 ಲಕ್ಷ ವಿಮೆ

08:11 AM May 19, 2020 | Sriram |

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಕರ್ತವ್ಯ ನಿರ್ವಹಿಸುವ ಸರಕಾರಿ ಸಾರಿಗೆ ಇಲಾಖೆ ಚಾಲಕರು ಹಾಗೂ ನಿರ್ವಾಹಕರಿಗೂ 30 ಲಕ್ಷ ರೂ. ವಿಮೆ ಮಾಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಚಾಲಕರು ಹಾಗೂ ನಿರ್ವಾಹಕರು ಕೋವಿಡ್‌ ವೈರಸ್‌ ಗೆ ತುತ್ತಾಗಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು. ಮಂಗಳವಾರದಿಂದ ಸರಕಾರಿ ಸಾರಿಗೆ ಬಸ್‌ಗಳು ಸಂಚಾರ ಮಾಡಲಿದ್ದು ಈ ಸಂದರ್ಭದಲ್ಲಿ ಚಾಲಕರು ಹಾಗೂ ನಿರ್ವಾಹಕರಿಗೆ ಸ್ಯಾನಿಟೈಸರ್‌, ಮಾಸ್ಕ್ ಬಳಕೆ ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಬಸ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next