Advertisement

ಮಂಜೇಶ್ವರ ಗೋವಿಂದ ಪೈ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕಾಗಿ 30 ಲಕ್ಷ ರೂ. ಧನ ಸಹಾಯ ಮಂಜೂರು

06:40 PM Aug 30, 2022 | Team Udayavani |

ಬೆಂಗಳೂರು: ಕನ್ನಡದ ಮೊದಲ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ  ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕಾಗಿ 30 ಲಕ್ಷ ರೂ. ಧನ ಸಹಾಯ ಮಂಜೂರು ಮಾಡಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮಹತ್ವದ ಆದೇಶ ಪ್ರಕಟಿಸಿದೆ.

Advertisement

ಗೋವಿಂದ ಪೈ ಗಳ ಸಂಶೋಧನಾ ಸಂಪುಟ 1995 ರಲ್ಲಿ ಪ್ರಕಟವಾಗಿತ್ತು. ಇದಾಗಿ ಇಪ್ಪತೈದು ವರ್ಷಗಳು ಕಳೆದಿವೆ. ಸದ್ಯಕ್ಕೆ ಆ ಸಂಪುಟದ ಯಾವುದೇ ಪ್ರತಿಗಳು ಲಭ್ಯವಿರಲಿಲ್ಲ.

ಈ ಹಿನ್ನೆಲೆಯಲ್ಲಿ ಉಡುಪಿಯ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿಗಳು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಪತ್ರ ಬರೆದು ಧನ ಸಹಾಯ ಕೋರಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ 30 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.

ಮಂಜೇಶ್ವರ ಗೋವಿಂದ ಪೈಗಳು ಕನ್ನಡದ ಮೊದಲ ರಾಷ್ಟ್ರಕವಿ. ಇಪ್ಪತೈದು ವರ್ಷಗಳ ನಂತರ ಅವರ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕೆ ಸರಕಾರ ಧನಸಹಾಯ ಒದಗಿಸಿದೆ. ಇದರಿಂದ ಗೋವಿಂದ ಪೈಗಳ ಲೇಖನ ಸಂಪತ್ತು ಕನ್ನಡಿಗರನ್ನು ತಲುಪುವಂತಾಗಲಿ ಎಂದು ಆಶಿಸುತ್ತೇನೆ-ವಿ.ಸುನಿಲ್ ಕುಮಾರ್ ಕನ್ನಡ- ಸಂಸ್ಕ್ರತಿ ಹಾಗೂ ಇಂಧನ ಸಚಿವರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next