Advertisement

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ

05:32 PM Jul 16, 2020 | keerthan |

ಚಿಕ್ಕಮಗಳೂರು: ಕಾಫಿನಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಸಂಕಟ ಮುಂದುವರಿದಿದೆ. ಗುರುವಾರ ಜಿಲ್ಲೆಯಲ್ಲಿ ಒಂದೇ ದಿನ 30 ಜನರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.

Advertisement

ಚಿಕ್ಕಮಗಳೂರು ಜಿಲ್ಲಾಡಳಿತ ಇಂದಿನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರಿನಲ್ಲಿ 14, ಕಡೂರು 7, ತರೀಕೆರೆ 3, ಕೊಪ್ಪ 3, ಮೂಡಿಗೆರೆ 2, ಅಜ್ಜಂಪುರದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇಂದಿನ 30 ಹೊಸ ಕೋವಿಡ್-19 ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 198ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ 19 ಸೋಂಕಿನಿಂದ ಏಳು ಮಂದಿ ಬಲಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next