Advertisement

ಚೇತನ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ 300 ಜನರಿಗೆ ಲಸಿಕೆ

08:02 PM Apr 09, 2021 | Team Udayavani |

ಹುಬ್ಬಳ್ಳಿ: ಚೇತನ ಶಿಕ್ಷಣ ಸಮೂಹ ಸಂಸ್ಥೆಯಲ್ಲಿ ಕೋವಿಡ್‌-19 ಲಸಿಕೆ ನೀಡಿಕೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಇಲಾಖೆ ಸಹಕಾರದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಅಧಿಕ ಜನರು ಲಸಿಕೆ ಪಡೆದುಕೊಂಡರು.

Advertisement

ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೂ ಲಸಿಕೆ ನೀಡಲಾಯಿತು. ಶ್ರೀನಗರ, ತಾಜ್‌ನಗರ ಸುತ್ತಮುತ್ತಲಿನ ಜನರು ಹಾಗೂ ಸಂಸ್ಥೆ ಸಿಬ್ಬಂದಿ ಇದರ ಪ್ರಯೋಜನ ಪಡೆದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಜಯಂತ ಅವರು ಲಸಿಕೆ ಕುರಿತಾಗಿ ಜಾಗೃತಿ ಮೂಡಿಸಿದರು.

ಪಾಲಿಕೆ ಮಾಜಿ ಸದಸ್ಯ ರಾಜಣ್ಣಾ ಕೊರವಿ, ಸಂಸ್ಥೆ ನಿರ್ದೇಶಕ ಡಾ| ವಿ.ಎಂ. ಕೊರವಿ ಇದ್ದರು. ಎರಡನೇ ಹಂತದ ಲಸಿಕೆ ಕಾರ್ಯಕ್ರಮವನ್ನು ಆರು ವಾರಗಳ ನಂತರ ಸಂಸ್ಥೆಯಲ್ಲೇ ಆಯೋಜಿಸಲಾಗವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next