Advertisement

ತಮಿಳುನಾಡಿಗೆ ಸಾಗಿಸುತ್ತಿದ್ದ 300 ಕೆಜಿ ಬೆಳ್ಳಿ ವಶ

11:18 PM Feb 02, 2020 | Lakshmi GovindaRaj |

ಬೆಳಗಾವಿ: ಮಹಾರಾಷ್ಟ್ರದಿಂದ ತಮಿಳುನಾಡಿಗೆ ಅಕ್ರಮವಾಗಿ ಬೆಳ್ಳಿ ಗಟ್ಟಿ ಹಾಗೂ ಆಭರಣಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು, 63 ಲಕ್ಷ ರೂ. ಮೌಲ್ಯದ 300 ಕೆ.ಜಿ. ಬೆಳ್ಳಿ, 3 ಲಕ್ಷ ರೂ. ನಗದನ್ನು ಹುಕ್ಕೇರಿ ತಾಲೂಕಿನ ದಾದಬಾನಹಟ್ಟಿ ಬಳಿ ವಶಪಡಿಸಿಕೊಂಡಿದ್ದಾರೆ.

Advertisement

ತಮಿಳುನಾಡಿನ ಸವಾಪೇಟ ಸೇಲಂನ ವಿಜಯಕುಮಾರ ಆತ್ಮಾರಾಮ ಶಿಂಧೆ ಹಾಗೂ ಮಹಾ ರಾಷ್ಟ್ರದ ಸಾತಾರಾ ಜಿಲ್ಲೆಯ ಕಟಾವ್‌ ತಾಲೂಕಿನ ಬೆಳೆವಾಡಿಯ ರಿಯಾಜ್‌ ಶಾಕೀರ ಹುಸೇನ ಮುಲ್ಲಾನಿ ಎಂಬುವವರನ್ನು ಬಂಧಿಸಲಾಗಿದೆ. ಡಸ್ಟರ್‌ ಕಾರು, 300 ಕೆ.ಜಿ.ಬೆಳ್ಳಿ ಗಟ್ಟಿ, 3 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಯಮಕನಮರಡಿ ಹಾಗೂ ಡಿಸಿಐಬಿ ಘಟಕ ಪೊಲೀಸರು, ಕಾರು ತಡೆದು ವಿಚಾರಣೆ ನಡೆಸಿದಾಗ ದೊಡ್ಡ ಪ್ರಮಾಣದಲ್ಲಿ ಬೆಳ್ಳಿ ಪತ್ತೆಯಾಗಿದೆ. ಡಿಸಿಐಬಿ ಘಟಕ ಇನ್ಸ್‌ಪೆಕ್ಟರ್‌ ನಿಂಗನಗೌಡ ಪಾಟೀಲ, ಯಮಕನಮರಡಿಯ ರಮೇಶ ಪಾಟೀಲ, ಡಿಸಿಐಬಿ ಎಎಸ್‌ ಐ ಡಿ.ಕೆ. ಪಾಟೀಲ, ಸಿಬ್ಬಂದಿಗಳಾದ ಟಿ.ಕೆ. ಕೊಳಚಿ, ಎಂ.ಜಿ. ಮುಜಾವರ, ಎಸ್‌.ಎಂ. ಮಂಗಣ್ಣವರ, ಎಂ.ಆರ್‌. ಪಠಾಣ, ವಿ.ಆರ್‌. ನಾಯಕ, ಆರ್‌.ಬಿ.ಕಲ್ಲೋಳ್ಳಿ ದಾಳಿ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next