Advertisement

ತಮಿಳುನಾಡಿಗೆ 31.24 ಟಿಎಂಸಿ ಕಾವೇರಿ ನೀರು?

05:53 AM Jun 12, 2020 | Lakshmi GovindaRaj |

ಚೆನ್ನೈ/ನವದೆಹಲಿ: ತಮಿಳುನಾಡಿಗೆ ಹಾಲಿ ತಿಂಗಳು ಮತ್ತು ಜುಲೈಗೆ ಅನ್ವಯವಾಗುವಂತೆ 31.24 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಮೇಕೆದಾಟುವಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟು ಯೋಜನೆಯ ಬಗ್ಗೆ ತಮಿಳುನಾಡು ಮತ್ತು ಪುದುಚೇರಿ ಸರ್ಕಾರದ ಪ್ರತಿನಿಧಿಗಳು ಪ್ರಬಲ ವಿರೋಧ ವ್ಯಕ್ತಪಡಿಸಿದರು.

Advertisement

ಹೀಗಾಗಿ, ಬುಧವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ  ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಲಿಲ್ಲ. ಮೇಕೆದಾಟು ಅಣೆಕಟ್ಟು ನಿರ್ಮಾಣ  ವಿಚಾರವನ್ನು ಸಭೆಯಲ್ಲಿ ಪರಿಗಣಿಸಲೇ ಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಕೆಲ ದಿನಗಳ ಹಿಂದೆ ಕೇಂದ್ರ ಜಲಶಕ್ತಿ  ಖಾತೆ ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು. ದೇಶಾದ್ಯಂತ ಕೋವಿಡ್‌ 19 ಸ್ಥಿತಿ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ 2018ರಲ್ಲಿ ರಚನೆಗೊಂಡ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.  ಕರ್ನಾಟಕದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಪ್ರಾಧಿಕಾರದ ಸದಸ್ಯ ನವೀನ್‌ ಕುಮಾರ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next