Advertisement

Fraud: ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರ ಸೋಗಿನಲ್ಲಿ ಶಿಕ್ಷಕಿಗೆ 32 ಲಕ್ಷ ವಂಚನೆ

01:48 PM Sep 06, 2023 | Team Udayavani |

ಬೆಂಗಳೂರು: ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರ ಸೋಗಿನಲ್ಲಿ ಕರೆ ಮಾಡಿದ್ದ ಸೈಬರ್‌ ವಂಚಕರು ಶಿಕ್ಷಕಿಯೊಬ್ಬರಿಗೆ 32.25 ಲಕ್ಷ ರೂ. ವಂಚಿಸಿರುವುದು ಬೆಳಕಿಗೆ ಬಂದಿದೆ.

Advertisement

ಈ ಸಂಬಂಧ ದೇವನಹಳ್ಳಿ ನಿವಾಸಿ ಚತುರಾರಾವ್‌(50) ಎಂಬ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಈಶಾನ್ಯ ವಿಭಾಗದ ಸಿಇಎನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ‌

ವೃತ್ತಿಯಲ್ಲಿ ಶಿಕ್ಷಕಿ ಆಗಿರುವ ಚತುರಾರಾವ್‌ಗೆ ಆ.2ರಂದು ಫೆಡೆಕ್ಸ್‌ ಕಂಪನಿಯ ಪ್ರತಿನಿಧಿ ಹೆಸರಿನಲ್ಲಿ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ, “ನಿಮ್ಮ ಹೆಸರಿನಲ್ಲಿ ಕೊರಿಯರ್‌ ಪಾರ್ಸೆಲ್ ಬಂದಿದ್ದು, ಅದರಲ್ಲಿ ನಿಮ್ಮ ಮೊಬೈಲ್‌ ನಂಬರ್‌, ಆಧಾರ್‌ ನಂಬರ್‌, ಐದು ಪಾಸ್‌ಪೋರ್ಟ್‌, ಐದು ಕ್ರೆಡಿಟ್‌ ಕಾರ್ಡ್‌ ಮತ್ತು ಒಂದು ಲ್ಯಾಪ್‌ ಟಾಪ್‌’ ಪತ್ತೆಯಾಗಿದೆ. ಈ ಪ್ರಕರಣವನ್ನು ಮುಂಬೈ ಕ್ರೈಂ ಬ್ರಾಂಚ್‌ ಪೊಲೀಸರಿಗೆ ವರ್ಗಾಯಿಸುತ್ತೇವೆ ಎಂದು ಹೇಳಿ, ಕೈಪ್‌ ಎಂಬ ಆ್ಯಪ್‌ ಡೌನ್‌ಲೋಡ್‌ ಮಾಡಿಸಿದ್ದಾನೆ. ಅಲ್ಲದೆ, ಮಾದಕ ವಸ್ತು ನಿಗ್ರಹ ಪಡೆ ಅಧಿಕಾರಿ ಜತೆ ಮಾತನಾಡಿಸಿದ್ದಾನೆ. ಬಳಿಕ ಅಪರಿಚಿತ ವ್ಯಕ್ತಿ ವಿಡಿಯೋ ಕರೆ ಮಾಡಿ, “ಯಾರೋ ನಿಮ್ಮ ಹೆಸರಿನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತಿಳಿದುಕೊಳ್ಳಬೇಕಾದರೆ ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ವರ್ಗಾಯಿಸಬೇಕು’ ಎಂದಿದ್ದಾನೆ.

ಆರೋಪಿಗಳ ಹೇಳಿಕೆಯಿಂದ ಗಾಬರಿಗೊಂಡ ಚತುರಾ ರಾವ್‌, ತಮ್ಮ ಎರಡು ಬ್ಯಾಂಕ್‌ ಖಾತೆಗಳಿಂದ ಹಂತವಾಗಿ 32.25 ಲಕ್ಷ ರೂ. ವರ್ಗಾಯಿಸಿದ್ದಾರೆ. ಆ ನಂತರ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಸಂಬಂಧ ಚತುರಾ ರಾವ್‌ ದೂರು ನೀಡಿದ್ದಾರೆ ಎಂದು ಸೆನ್‌ ಠಾಣೆ ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next