Advertisement

ಮುಂದುವರಿದ ಸೋಂಕು ಸಂಕಟ: ರಾಜ್ಯದಲ್ಲಿಂದು 337 ಜನರಿಗೆ ಸೋಂಕು ದೃಢ

07:14 PM Jun 19, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಸಂಕಟ ಮುಂದುವರಿದಿದ್ದು, ಇಂದು ಮತ್ತೆ 337 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 8281ಕ್ಕೆ ಏರಿಕೆಯಾಗಿದೆ.

Advertisement

ರಾಜ್ಯದಲ್ಲಿ ಇಂದು 230 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 5210 ಜನರ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 61 ಜನರು ಇಂದು ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಬೆಂಗಳೂರು ನಗರದಲ್ಲಿಂದು ಸೋಂಕು ಸ್ಪೋಟವೇ ಸಂಭವಿಸಿದೆ. ನಗರದಲ್ಲಿಂದು 138 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇದಿರಂದ ಬೆಂಗಳೂರು ನಗರ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 982ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿರುವ ಕಲಬುರಗಿಯಲ್ಲಿ ಇಂದು 52 ಮಂದಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇದಿರಂದ ಜಿಲ್ಲೆಯ ಸೋಂಕಿತರ ಸಂಖ್ಯೆ 1126ಕ್ಕೆ ಏರಿದೆ. ಬಳ್ಳಾರಿಯಲ್ಲಿ 37, ಹಾಸನದಲ್ಲಿ 18, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆ 12, ಉಡುಪಿ ಜಿಲ್ಲೆ11 ಮತ್ತು ಬೀದರ್ ನಲ್ಲಿ 10 ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ.

ರಾಜ್ಯದಲ್ಲಿಂದು ಸೋಂಕಿನ ಕಾರಣದಿಂದ ಹತ್ತು ಮಂದಿ ಅಸುನೀಗಿದ್ದಾರೆ. ಅವರಲ್ಲಿ ಏಳು ಮಂದಿ ಬೆಂಗಳೂರು ನಗರದವರಾಗಿದ್ದಾರೆ. ಉಳಿದಂತೆ ಬೀದರ್ ನಲ್ಲಿ  ಎರಡು ಮತ್ತು ವಿಜಯಪುರದಲ್ಲಿ ಒಂದು ಸಾವು ಪ್ರಕರಣಗಳು ವರದಿಯಾಗಿದೆ.

Advertisement

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8281ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 5210 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದು ರಾಜ್ಯದಲ್ಲಿ ಹತ್ತು ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಸೋಂಕಿನ ಕಾರಣದಿಂದ ಮರಣ ಹೊಂದಿದವರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next