Advertisement

ಕೇಂದ್ರದಿಂದ ರಾಜ್ಯಕ್ಕೆ 3,467 ಕೋ. ರೂ. ಜಿಎಸ್‌ಟಿ ಪರಿಹಾರ

11:20 PM Jan 21, 2022 | Team Udayavani |

ಬೆಂಗಳೂರು: ಕೇಂದ್ರ ಸರಕಾರವು ರಾಜ್ಯಕ್ಕೆ 3,467.62 ಕೋ. ರೂ.ಗಳ ಜಿಎಸ್‌ಟಿ ಪರಿಹಾರದ ಮೊತ್ತವನ್ನು ನೀಡಿದೆ. ಇದರಲ್ಲಿ 1,733.81 ಕೋ. ರೂ. 2022ರ ನಿಯಮಿತವಾಗಿ ರಾಜ್ಯಕ್ಕೆನೀಡಬೇಕಾದ ಕಂತಿನ ಹಣವಾಗಿದ್ದು, 1,733.81 ಕೋ. ರೂ.ಗಳನ್ನು ಕೇಂದ್ರ ಸರಕಾರ ಮುಂಗಡವಾಗಿ ಬಿಡುಗಡೆ ಮಾಡಿದೆ.

Advertisement

ಹೀಗಾಗಿ ರಾಜ್ಯದ ಜನರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಹಣ ಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸು
ವುದಾಗಿ ಸಿಎಂ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ:ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರಾಜ್ಯವು ಕೋವಿಡ್‌ 3ನೇ ಅಲೆಯಿಂದ ತತ್ತರಿಸಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ನೀಡಿರುವ ಮುಂಗಡ ಪರಿಹಾರದ ಹಣದಿಂದ ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next