Advertisement

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

08:50 PM Sep 28, 2024 | Team Udayavani |

ಮಂಗಳೂರು: ಸೈಬರ್‌ ಕ್ರೈಂ ಬ್ರಾಂಚ್‌ ಅಧಿಕಾರಿ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿಯೋರ್ವರನ್ನು ಬೆದರಿಸಿ 35 ಲ.ರೂ.ಗಳನ್ನು ವರ್ಗಾಯಿಸಿ ವಂಚಿಸಿರುವ ಬಗ್ಗೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ವ್ಯಕ್ತಿಯೋರ್ವರು ಸೆ.24ರಂದು ಮನೆಯಲ್ಲಿರುವಾಗ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಆತನನ್ನು ಮುಂಬೈಯ ಡಿಎಚ್‌ಎಲ್‌ ಕೊರಿಯರ್‌ ಸರ್ವಿಸ್‌ ಕಂಪೆನಿಯ ಕಾರ್ತಿಕ್‌ ಶರ್ಮಾ ಎಂದು ಪರಿಚಯಿಸಿಕೊಂಡು “ಮುಂಬೈನಿಂದ ತೈವಾನ್‌ಗೆ ಕಾನೂನುಬಾಹಿರವಾಗಿ ಮಾದಕ ವಸ್ತುಗಳಿರುವ ಕೊರಿಯರ್‌ ನಿಮ್ಮ ಹೆಸರಿನಲ್ಲಿ ಬಂದಿದೆ. ಅದನ್ನು ಮುಂಬೈ ಸೈಬರ್‌ ಕ್ರೈಂ ಬ್ರಾಂಚ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನೀವು ಸೈಬರ್‌ ಕ್ರೈಂ ಅಧಿಕಾರಿಗಳೊಂದಿಗೆ ಮಾತನಾಡಬೇಕು’ ಎಂದು ಹೇಳಿ  9957376759 ನಂಬರ್‌ನ್ನು ನೀಡಿದ್ದಾನೆ. ದೂರುದಾರರು  ಆ ನಂಬರ್‌ಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ ವ್ಯಕ್ತಿ ಆತನನ್ನು ಸೈಬರ್‌ ಕ್ರೈಂನ ಅಧಿಕಾರಿ ಪ್ರಾಣೇಶ್‌ ಗುಪ್ತಾ ಎಂದು ಪರಿಚಯಿಸಿಕೊಂಡು ವಿಡಿಯೋ ಕಾಲ್‌ ಮೂಲಕ ದೂರುದಾರರಲ್ಲಿ ಮಾತನಾಡಿ “ಅಂತಾರಾಷ್ಟ್ರೀಯ ಡ್ರಗ್ಸ್‌ ಪ್ರಕರಣದಲ್ಲಿ ನಿಮ್ಮ ಹೆಸರು ನಮೂದಿಸಿದ್ದು ನಿಮ್ಮನ್ನು ಅರೆಸ್ಟ್‌ ಮಾಡುತ್ತೇವೆ. ಈ ಪ್ರಕರಣದಿಂದ ಮುಕ್ತಗೊಳಿಸಲು ಹಣ ನೀಡಬೇಕು’ ಎಂದು ಹೇಳಿದ್ದಾನೆ. ಇದರಿಂದ ಭಯಗೊಂಡ ದೂರುದಾರರು ಅಪರಿಚಿತ ವ್ಯಕ್ತಿ ನೀಡಿದ ಖಾತೆಗೆ ಒಟ್ಟು 35 ಲ.ರೂ.ಗಳನ್ನು ವರ್ಗಾಯಿಸಿದ್ದಾರೆ. ಅನಂತರ ಇದೊಂದು ವಂಚನೆ ಎಂಬುದಾಗಿ ಗೊತ್ತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next