Advertisement

Fraud: ಖಾತೆಯಿಂದ 36,890 ರೂ. ವರ್ಗಾಯಿಸಿ ವಂಚನೆ

12:26 AM Oct 27, 2023 | Team Udayavani |

ಮಂಗಳೂರು: ಜಾಗ ಮಾರಾಟಕ್ಕೆ ಸಂಬಂಧಿಸಿದಂತೆ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ನೀಡಿದ್ದ ಹೆಬ್ಬೆರಳಿನ ಗುರುತು ಹಾಗೂ ಆಧಾರ್‌ ಕಾರ್ಡ್‌ ಪ್ರತಿಯನ್ನು ದುರ್ಬಳಕೆ ಮಾಡಿ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಬ್ಯಾಂಕ್‌ ಖಾತೆಯಿಂದ ಹಂತ ಹಂತವಾಗಿ 36,890 ರೂ. ಮೊತ್ತವನ್ನು ವರ್ಗಾವಣೆ ಮಾಡಿದ್ದಾರೆ ಎಂದು ವ್ಯಕ್ತಿಯೊಬ್ಬರು ಸೆನ್‌ ಠಾಣೆಗೆ ದೂರು ನೀಡಿದ್ದಾರೆ.

Advertisement

ಅ. 23ರಿಂದ ಸೆ. 9ರ ವರೆಗೆ ಖಾತೆಯಿಂದ ಒಟ್ಟು 36,890 ರೂ. ವರ್ಗಾವಣೆಯಾಗಿದೆ. ಬ್ಯಾಂಕ್‌ ಸ್ಟೇಟ್‌ಮೆಂಟ್‌ ಪರಿಶೀಲಿಸಿದಾಗ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಆಧಾರ್‌ ಕಾರ್ಡ್‌ ಮಾಹಿತಿ ಉಪಯೋಗಿಸಿ ಹಣ ವರ್ಗಾವಣೆ ಮಾಡಲಾಗಿದ್ದು, ಯಾವುದೇ ಒಟಿಪಿ ಸಂದೇಶವೂ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next