Advertisement

375 ಕ್ಯೂಸೆಕ್‌ ನೀರು ನದಿಗೆ ಬಿಡುಗಡೆ

10:57 AM Oct 29, 2019 | Suhan S |

ಚಿಂಚೋಳಿ: ತಾಲೂಕಿನಲ್ಲಿ ಶನಿವಾರ ಮತ್ತು ರವಿವಾರ ಮಧ್ಯರಾತ್ರಿ ಗುಡುಗು ಸಿಡಿಲಿನ ಸಮೇತ ಆರ್ಭಟದಿಂದ ಮಳೆ ಸುರಿದ ಪರಿಣಾಮವಾಗಿ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಹೆಚ್ಚಿನ ಮಳೆ ನೀರು ಹರಿದು ಬಂದಿದೆ. ಗೇಟ್‌ ಮೂಲಕ ನದಿಗೆ 375 ಕ್ಯೂಸೆಕ್‌ ನೀರು ಹರಿದು ಬಿಡಲಾಗಿದೆ ಎಂದು ಎಇಇ ಹಣಮಂತರಾವ ಪೂಜಾರಿ ತಿಳಿಸಿದ್ದಾರೆ.

Advertisement

ಚಂದನಕೇರಾ, ಭುಯ್ನಾರ (ಕೆ) ಐನಾಪುರ, ಬಸಂತಪುರ, ಚಿಮ್ಮನಚೋಡ, ಹಸರಗುಂಗಿ, ರಾಣಾಪುರ, ನರನಾಳ ಗ್ರಾಮಗಳಲ್ಲಿ ವ್ಯಾಪಕ ಮಳೆ ಸುರಿದಿದೆ. ಇದರಿಂದ ಸಣ್ಣ ಹಳ್ಳ ಕೊಳ್ಳಗಳು ತುಂಬಿ ಹರಿದಿವೆ. ಇದರಿಂದಾಗಿ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ ಹೆಚ್ಚುವರಿ ಮಳೆ ನೀರು ಬಂದಿದೆ. ಹಾಗಾಗಿ ಒಂದು ಗೇಟ್‌ ಮೂಲಕ ನದಿಗೆ ನೀರು ಹರಿಬಿಡಲಾಗಿದೆ.

ಜಲಾಶಯದ ಕನಿಷ್ಠಮಟ್ಟ ಕಾಪಾಡಿಕೊಳ್ಳಲಾಗುತ್ತಿದೆ. ಜಲಾಶಯದ ಬಳಿ ರಾತ್ರಿ ನಾಲ್ವರು ಕಾವಲುಗಾರರನ್ನು ಮತ್ತು ಇಂಜನಿಯರ್‌ ನಿಯೋಜಿಸ ಲಾಗಿದೆ. ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯದಿಂದ ಐದು ಸಲ ನದಿಗೆ ನೀರು ಬಿಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next