Advertisement

ರಾಜ್ಯದಲ್ಲಿ 3781 ರೈತರ ಆತ್ಮಹತ್ಯೆ

06:15 AM Feb 23, 2018 | Team Udayavani |

ವಿಧಾನಸಭೆ: ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಗೊಂಡ ನಂತರ ಇದುವರೆಗೆ 3,781 ರೈತರು
ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಪೈಕಿ 2,667 ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ನೀಡಿದ ಅವರು, ತೀವ್ರ ಬರಗಾಲ ಇದ್ದ ಕಾರಣ 2015-16 ಹಾಗೂ 2016-17ರಲ್ಲಿ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ 1,125 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದರು.

ನಮ್ಮ ಸರ್ಕಾರ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 1 ಲಕ್ಷ ರೂ. ಇದ್ದ ಪರಿಹಾರ 5ಲಕ್ಷ ರೂ.ಗೆ ಏರಿಸಿತು. ಹಾಗೆಂದ ಮಾತ್ರಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ನಾನು ಅನೇಕ ಬಾರಿ ರೈತರಿಗೆ ಕೈ ಮುಗಿದು ಸರ್ಕಾರ ನಿಮ್ಮ ಜತೆಗಿದೆ, ಧೈರ್ಯದಿಂದ ಇರಿ ಎಂದು ಮನವಿ ಮಾಡಿದ್ದೇನೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next