Advertisement

ಅಸ್ಸಾಂನಲ್ಲಿ 39 ಲಕ್ಷ ಮಂದಿಗೆ ತೊಂದರೆ

09:16 AM Jul 18, 2020 | mahesh |

ಗುವಾಹಟಿ/ಮುಂಬಯಿ: ಅಸ್ಸಾಂ ಪ್ರವಾಹ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 28 ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿದ್ದು, ಶುಕ್ರವಾರ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಹೀಗಾಗಿ, ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಬ್ರಹ್ಮಪುತ್ರ ನದಿ ಅಪಾಯ ಮಟ್ಟ ಮೀರಿದ್ದು, 1.3 ಲಕ್ಷ ಹೆಕ್ಟೇರ್‌ ಬೆಳೆ ನಾಶವಾಗಿದೆ. ಸುಮಾರು 50 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಪ್ರವಾಹವು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಹಾನಿ ಮಾಡಿದೆ. 33 ಜಿಲ್ಲೆಗಳ ಪೈಕಿ 28 ಜಿಲ್ಲೆಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, 40 ಲಕ್ಷ ಮಂದಿ ತೊಂದರೆಗೆ ಸಿಲುಕಿದ್ದಾರೆ. ಕೇರಳದಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮತ್ತೂಂದೆಡೆ, ದಕ್ಷಿಣ ಮುಂಬಯಿನಲ್ಲಿ ಗುರುವಾರ ಸಂಭವಿಸಿದ್ದ ಕಟ್ಟಡ ಕುಸಿತ ದುರಂತದಲ್ಲಿ ಶುಕ್ರವಾರ ಮತ್ತೂಬ್ಬ ಯುವಕ ಸಾವನ್ನಪ್ಪಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next