Advertisement

ಶಾರ್ಟ್ ಸರ್ಕ್ಯೂಟ್ ನಿಂದಾಗಿ 4 ಎಕರೆ ಕಬ್ಬು ಬೆಂಕಿಗಾಹುತಿ

10:38 AM Jan 16, 2022 | Team Udayavani |

ಹರಪನಹಳ್ಳಿ: ತಾಲೂಕಿನ ಶಿಂಗ್ರಿಹಳ್ಳಿ ಗ್ರಾಮದ ರೈತ ಚೌಟಗಿ ಗೋಣಿಬಸಪ್ಪಗೆ ಸೇರಿದ 4 ಎಕರೆ ಜಮೀನು ನಲ್ಲಿ ಬೆಳೆಸಿದ್ದ ಕಬ್ಬು ಬೆಳೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

Advertisement

ಶಾರ್ಟ್ ಸರ್ಕ್ಯೂಟ್‍ನಿಂದಾಗಿ ಸುಮಾರು 4 ರಿಂದ 5 ಲಕ್ಷ ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬೆಳೆ ಕಳೆದುಕೊಂಡ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ವಿದ್ಯುತ್ ತಂತಿಗಳಿಂದ ಈ ಅವಘಡ ನಡೆದಿದ್ದು, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ರೈತ  ಗೋಣಿಬಸಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಗ್ರಾಮ ಲೇಕ್ಕಾಧಿಕಾರಿ ಮಾರಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕು ಎಂದು ರೈತ ಗೋಣಿಬಸಪ್ಪ ಸಕಾ೯ರಕ್ಕೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next