Advertisement

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

03:31 PM Oct 02, 2024 | Team Udayavani |

ಮಹಾರಾಷ್ಟ್ರ: ಗಂಡ, ಹೆಂಡತಿ, ಇಬ್ಬರು ಪುತ್ರರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಬುಧವಾರ (ಸೆ.2) ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಮೃತರನ್ನು ನಿವೃತ್ತ ಶಿಕ್ಷಕ ವಿಜಯ್ ಮಧುಕರ್ ಪಚೋರಿ (68), ಅವರ ಪತ್ನಿ ಮಾಲಾ (55) ಮತ್ತು ಅವರ ಮಕ್ಕಳಾದ ಗಣೇಶ್ (38) ಮತ್ತು ದೀಪಕ್ (36) ಎಂದು ಗುರುತಿಸಲಾಗಿದೆ.

ಕೆಲ ದಿನಗಳಿಂದ ಮನೆಯವರು ನೆರೆಹೊರೆಯವರಿಗೆ ಕಾಣದೇ ಇದ್ದುದರಿಂದ ಅನುಮಾನಗೊಂಡ ಅಕ್ಕಪಕ್ಕದ ಮನೆಯವರು ಮಧುಕರ್ ಅವರ ಮನೆಯ ಬಾಗಿಲು ಬಡಿದಿದ್ದಾರೆ ಆದರೆ ಮನೆಯೊಳಗಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಬಂದ ಪೊಲೀಸರು ಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ ಈ ವೇಳೆ ನಾಲ್ವರು ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಅಲ್ಲದೆ ಮನೆ ಪರಿಶೀಲನೆ ನಡೆಸಿದ ವೇಳೆ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಇದರಲ್ಲಿ ವಂಚನೆ ಪ್ರಕರಣನವೊಂದಕ್ಕೆ ಸಂಬಂಧಿಸಿ ಮಧುಕರ್ ಅವರ ಪುತ್ರನಾದ ಗಣೇಶ್ ನನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದರು ಈ ಕಾರಣಕ್ಕೆ ಕುಟುಂಬ ಸದಸ್ಯರು ಮನನೊಂದು ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರದಲ್ಲಿ ಬರೆದುಕೊಂಡು ನಾಲ್ವರು ಸಹಿ ಹಾಕಿದ್ದಾರೆ.

ಮೇಲ್ನೋಟಕ್ಕೆ ಆಕಸ್ಮಿಕ ಸಾವಿನಂತೆ ಕಂಡುಬಂದಿದ್ದು ಪ್ರಕರಣ ದಾಖಲಿಸಿಕೊಂಡ ನಾರ್ಖೇಡ್ ಪೊಲೀಸರು ನಾಲ್ಕು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Advertisement

Udayavani is now on Telegram. Click here to join our channel and stay updated with the latest news.

Next