Advertisement

ನಾಲ್ಕು ಲಕ್ಷ ಬಿಪಿಎಲ್‌ ಅರ್ಜಿಗಳಿಗೆ ತಿಂಗಳಲ್ಲಿ ಮುಕ್ತಿ: ಉಮೇಶ್‌ ಕತ್ತಿ

07:15 PM Mar 28, 2022 | Team Udayavani |

ಬೆಂಗಳೂರು: ಪರಿಶೀಲನೆ ಮುಗಿದಿರುವ 4 ಲಕ್ಷ ಬಿಪಿಎಲ್‌ ಅರ್ಜಿಗಳಿಗೆ ಒಂದು ತಿಂಗಳಲ್ಲಿ ಮುಕ್ತಿ ನೀಡಲಾಗುವುದು ಎಂದು ಆಹಾರ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಬಿಪಿಎಲ್‌ ಕಾರ್ಡ್‌ಗೆ 15.53 ಲಕ್ಷ ಅರ್ಜಿಗಳು ಸ್ವೀಕೃತವಾಗಿದ್ದವು. ಈ ಪೈಕಿ 8.03 ಲಕ್ಷ ಅರ್ಹ ಅರ್ಜಿದಾರರಿಗೆ ಪಡಿತರ ಕಾರ್ಡ್‌ ನೀಡಲಾಗಿದೆ.

ಕೋವಿಡ್‌ ಕಾರಣದಿಂದ ಮನೆಮನೆಗೆ ತೆರಳಿ ಬಯೋಮೆಟ್ರಿಕ್‌ ಪಡೆದುಕೊಳ್ಳುವುದು ಕಷ್ಟವಾಗಿದ್ದರಿಂದ ಅರ್ಜಿಗಳ ವಿಲೇವಾರಿಗೆ ವಿಳಂಬವಾಗಿದೆ.

ಇದನ್ನೂ ಓದಿ:“ಕ್ಯಾಲೆಂಡರ್ ತಿಂಗಳ ವ್ಯಾಲಿಡಿಟಿ” ಪ್ರಿ-ಪೇಯ್ಡ್ ಪ್ಲಾನ್ ಲಾಂಚ್ ಮಾಡಿದ ಜಿಯೋ

ಬಾಕಿ 8 ಲಕ್ಷ ಅರ್ಜಿಗಳ ಪೈಕಿ ಪರಿಶೀಲನೆ ಮುಗಿದಿರುವ 4 ಲಕ್ಷ ಅರ್ಜಿಗಳನ್ನು ಒಂದು ತಿಂಗಳಲ್ಲಿ ವಿಲೇವಾರಿ ಮಾಡಲಾಗುವುದು. ಉಳಿದವುಗಳನ್ನು ಜೂನ್‌ ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next