Advertisement
ಕಂಠೀರವ ಕ್ರೀಡಾಂಗಣದಲ್ಲಿ ನವೀಕರಣಗೊಂಡ ಒಳಾಂಗಣ ಬಾಸ್ಕೆಟ್ಬಾಲ್ ಕೋರ್ಟ್ ಅನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ದೇವನಹಳ್ಳಿ, ತಾವರೆಕೆರೆ, ಗುಂಜೂರು ಮತ್ತು ಎಚ್.ಎಸ್.ಆರ್ ಲೇಔಟ್ನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
Related Articles
Advertisement
ಕೆಲವು ಸಲ ಕ್ರೀಡಾಪಟುಗಳು ಅಭ್ಯಾಸದ ವೇಳೆ ಗಾಯಾಳುಗಳಾಗುತ್ತಾರೆ. ಇದನ್ನು ಗಂಭೀರವಾಗಿವಾಗಿ ಪರಿಗಣಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಪ್ರಥಮ ಬಾರಿಗೆ ರಾಜ್ಯ ಸರ್ಕಾರ ಇಂತಹ ಪ್ರಯತ್ನಕ್ಕೆ ಮುಂದಾಗಿದ್ದು, ತಜ್ಞ ವೈದ್ಯರು ಕ್ರೀಡಾಪಟುಗಳನ್ನು ಆರೈಕೆ ಮಾಡಲಿದ್ದಾರೆ ಎಂದು ಹೇಳಿದರು.
ಫೀಬಾ ಏಷ್ಯಾ ಕಪ್ ಅ.28ಕ್ಕೆ: ಅ.28ರಿಂದ ನ.3ರವರೆಗೆ ನವೀಕೃತ ಬಾಸ್ಕೆಟ್ಬಾಲ್ ಕ್ರೀಡಾಂಗಣದಲ್ಲಿ 18 ವರ್ಷದೊಳಗಿನ ಮಹಿಳೆಯರ ಫೀಬಾ ಏಷಿಯನ್ ಬಾಸ್ಕೆಟ್ ಬಾಲ್ ಪಂದ್ಯಾವಳಿ ನಡೆಯಲಿದ್ದು, ಇದರ ಉದ್ಘಾಟನೆ 27ರಂದು ಖಾಸಗಿ ಹೋಟೆಲ್ನಲ್ಲಿ ಸಂಜೆ 6.30ಕ್ಕೆ ನೆರವೇರಲಿದೆ. ರಾಜ್ಯಪಾಲರು ಸಮಾರಂಭಕ್ಕೆ ಚಾಲನೆ ನೀಡಲಿದ್ದು, ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಮಲೇಷಿಯಾ, ಚೀನಾ, ಕಜೇಕಿಸ್ತಾನ್, ಇರಾನ್ ಸೇರಿದಂತೆ 16 ದೇಶಗಳ ತಂಡಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಆಯೋಜಿಸಿದರೆ ಸಹಕಾರ: ಪ್ರೋ ಕಬಡ್ಡಿ ಬೆಂಗಳೂರಿನಿಂದ ಬೇರೆ ಪ್ರದೇಶಗಳಿಗೆ ಸ್ಥಳಾಂತರವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಬೆಂಗಳೂರಿನಲ್ಲಿ ನಡೆಯದೇ ಇರುವುದಕ್ಕೆ ಕಾರಣಗಳೇ ಇಲ್ಲ. ಆಯೋಜಕರು ತಮಗೆ ಎಲ್ಲಿ ಅನುಕೂಲವಾಗುತ್ತದೋ ಅಲ್ಲಿ ಆಯೋಜಿಸುತ್ತಾರೆ. ಬೆಂಗಳೂರಿನಲ್ಲಿ ಪ್ರೋ ಕಬಡ್ಡಿ ಆಯೋಜನೆ ಮಾಡುವ ಕುರಿತು ಇದುವರೆಗೂ ಯುವಜನ ಮತ್ತು ಕ್ರೀಡಾ ಇಲಾಖೆಯನ್ನು ಆಯೋಜಕರು ಸಂಪರ್ಕಿಸಿಲ್ಲ ಎಂದರು.
ಡಿಕೆಶಿ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ: ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಸಂಬಂಧಿಸಿದೆ ಸಚಿವ ಡಿ.ಕೆ.ಶಿವಕುಮಾರ್ ಅವರು ಯಾವ ಕಾರಣಕ್ಕೆ ಆ ರೀತಿ ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕೂ ಧರ್ಮ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಸ್ಪಷ್ಟಪಡಿಸಿದ್ದೆ.
ಅದೇ ಮಾತನ್ನು ಈಗಲೂ ಹೇಳಬಯಸುತ್ತೇನೆ. ಪ್ರತ್ಯೇಕ ಲಿಂಗಾಯಿತ ಧರ್ಮದ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅಥವಾ ಎಂ.ಬಿ.ಪಾಟೀಲ್ ಅವರು ಏನು ಹೇಳಿದ್ದಾರೆ ಎಂಬುವುದು ತಿಳಿದಿಲ್ಲ. ಈ ಬಗ್ಗೆ ಇಬ್ಬರೂ ನಾಯಕರನ್ನು ತಾವು ಸಂಪರ್ಕಿಸಿಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.