Advertisement
ಮೂರು ವರ್ಷಗಳ ಪದವಿ ವ್ಯಾಸಂಗದ ಸಂದರ್ಭದಲ್ಲಿದ್ದ ನಾಲ್ಕು ಸೆಮಿಸ್ಟ್ಗಳ ಕನ್ನಡ ಭಾಷಾ ವ್ಯಾಸಂಗವನ್ನು ಎರಡು ಸೆಮಿಸ್ಟರ್ಗಳಿಗೆ ಮೊಟಕುಗೊಳಿಸಲಾಗಿದೆ. ರಾಜ್ಯ ಸರ್ಕಾರದ ಈ ಎರಡು ಕ್ರಮಗಳು ವಿದ್ಯಾರ್ಥಿಗಳ ಹಾಗೂ ಕನ್ನಡ ವಿರೋಧಿ ಮತ್ತು ರಾಜ್ಯದ ಅಭಿವೃದ್ದಿ ವಿರೋಧಿಯಾಗಿದೆ. ಸರ್ಕಾರ ತಕ್ಷಣವೇ ಈ ಎರಡು ಕ್ರಮಗಳನ್ನು ವಾಪಾಸು ಪಡೆಯುವಂತೆ ಎಡ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ವಾಸುದೇವ ರೆಡ್ಡಿ ಹಾಗೂ ರಮೇಶ್ ನಾಯಕ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಈ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ಲೂಟಿ ಹೆಚ್ಚಲಿದೆ. ಹಾಗೆಯೇ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಕಲಿಯುವ ಅವಕಾಶವನ್ನು ನಾಲ್ಕು ಸೆಮಿಸ್ಟರ್ ಗಳ ಅವಧಿಗಳಿಂದ ಎರಡು ಸೆಮಿಸ್ಟರ್ ಗಳ ಅವಧಿಗೆ ಮೊಟಕು ಮಾಡಿರುವುದು ಕನ್ನಡ ಸಾಹಿತ್ಯ ಹಾಗೂ ಸಂಸ್ಕೃತಿಯ ಮೇಲೆ ದುಷ್ಪರಿಣಾಮ ಬೀರಲಿದೆ. ಈ ಎರಡು ಅಂಶಗಳನ್ನು ಕೈಬಿಟ್ಟು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.