Advertisement

BJP, JD(S) ನಿಂದ 40ಕ್ಕೂ ಹೆಚ್ಚು ಪ್ರಮುಖರು ಶೀಘ್ರ ಕಾಂಗ್ರೆಸ್ ಗೆ : ಡಿ.ಕೆ.ಶಿವಕುಮಾರ್

08:00 PM Oct 12, 2023 | Team Udayavani |

ಬೆಂಗಳೂರು: ಮೈತ್ರಿಯನ್ನು ವಿರೋಧಿಸಿರುವ 40 ಕ್ಕೂ ಹೆಚ್ಚು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ.

Advertisement

ವಿಧಾನಸಭಾ ಚುನಾವಣೆಗೆ ಶಿರಹಟ್ಟಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಸುದ್ದಿಗಾರರೊಂದಿಗೆ ಶಿವಕುಮಾರ್ ಮಾತನಾಡಿದರು.

”40ಕ್ಕೂ ಹೆಚ್ಚು ಪ್ರಮುಖ ನಾಯಕರ ಅರ್ಜಿಗಳು ನನ್ನ ಮುಂದಿವೆ. ನಾನು ಈ ಮಾಹಿತಿಯನ್ನು ಬಹಿರಂಗಪಡಿಸಲು ಬಯಸಲಿಲ್ಲ, ಆದರೆ ಈಗ ಪರಿಸ್ಥಿತಿ ಬಂದಿದೆ. ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದ ನಂತರ, ನಾವು ಅವರನ್ನು ಒಬ್ಬೊಬ್ಬರಾಗಿ ಸೇರಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಹೇಳಿದರು.

“ಮೈತ್ರಿಯನ್ನು ವಿರೋಧಿಸಿ ಅನೇಕ ನಾಯಕರು ನಮ್ಮ ಪಕ್ಷಕ್ಕೆ ಸೇರಲು ಆಸಕ್ತಿ ತೋರಿಸಿದ್ದಾರೆ. ಈ ನಾಯಕರು ಸೇರ್ಪಡೆಗೊಂಡರೆ ನಮ್ಮ ನಾಯಕತ್ವಕ್ಕೆ ಹಾಗೂ ದೇಶಕ್ಕೆ ಅನುಕೂಲವಾಗುತ್ತದೆ. ಉತ್ತರದ ಬೀದರ್‌ನಿಂದ ದಕ್ಷಿಣದ ಚಾಮರಾಜನಗರದವರೆಗೆ ಇದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದಿಂದ 100 ಕ್ಕೂ ಹೆಚ್ಚು ಜನರು ಕಾಂಗ್ರೆಸ್ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಲಮಾಣಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next