Advertisement

ಎರಡೇ ಎಕರೆಯಲ್ಲಿ 40 ಟನ್‌ ಬಾಳೆ ಫಸಲು

08:11 PM Jun 23, 2021 | Team Udayavani |

ಧಾರವಾಡ: ಕವಲಗೇರಿ ಗ್ರಾಮದ ರೈತರೊಬ್ಬರು ತಮ್ಮ ಎರಡು ಎಕರೆ ಭೂಮಿಯಲ್ಲಿ ನರೇಗಾ ಯೋಜನೆಯಡಿ ನೆರವು ಪಡೆದು ಬಾಳೆ ಕೃಷಿ ಮಾಡಿ ಸುಮಾರು 40 ಟನ್‌ ಇಳುವರಿ ಪಡೆದು 3 ಲಕ್ಷ ರೂ.ಗಳಿಗೂ ಅಧಿಕ ಆದಾಯ ಗಳಿಸಿದ್ದಾರೆ.

Advertisement

ಕವಲಗೇರಿ ಗ್ರಾಮದ ತಿಪ್ಪಣ್ಣ ಕಲ್ಲಪ್ಪ ತಿರ್ಲಾಪುರ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಅಂಗಾಂಶ ಬಾಳೆಯ ಹೊಸ ತೋಟವಾಗಿ ಅಭಿವೃದ್ಧಿ ಪಡಿಸಲು ತೋಟಗಾರಿಕೆ ಇಲಾಖೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ 2020-21ನೇ ಸಾಲಿನಲ್ಲಿ ಕೂಲಿವೆಚ್ಚವಾಗಿ 78 ಸಾವಿರ ರೂ. ಹಾಗೂ ಸಾಮಗ್ರಿ ವೆಚ್ಚವಾಗಿ 27 ಸಾವಿರ ರೂ. ಅನುದಾನದ ನೆರವು ಪಡೆದು 283 ಮಾನವ ದಿನಗಳನ್ನು ಸೃಜಿಸಿದ್ದರು. ಪ್ರಸಕ್ತ ಬಾಳೆ ಸುಮಾರು 40 ಟನ್‌ ಫಸಲು ನೀಡಿದ್ದು, ಅದರ ಮಾರಾಟದಿಂದ ಬೆಳೆಗಾರರಾದ ತಿಪ್ಪಣ್ಣ ಅವರು ಸುಮಾರು 3 ಲಕ್ಷ 20 ಸಾವಿರ ರೂ. ಆದಾಯ ಗಳಿಸಿದ್ದಾರೆ ಎಂದು ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿ ಮಹೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.

ಕೊರೊನಾದ ಈ ಸಂಕಷ್ಟದ ದಿನಗಳಲ್ಲಿಯೂ ತೋಟಗಾರಿಕೆ ಬೆಳೆಗಳನ್ನು ಬೆಳೆದು ರೈತರು ಯಶಸ್ಸು ಸಾ  ಧಿಸಿರುವುದು ಮಾದರಿಯಾಗಿದೆ. ಬಹು ವಾರ್ಷಿಕ ಹಣ್ಣು, ಹೂವಿನ ತೋಟಗಳನ್ನು ಹೊಸದಾಗಿ ನಿರ್ಮಿಸಿಕೊಳ್ಳಲು ನರೇಗಾ ಯೋಜನೆಯಲ್ಲಿ ಸಾಕಷ್ಟು ಅವಕಾಶಗಳಿವೆ. ಕಳೆದ ಸಾಲಿನಲ್ಲಿ ನಿಗದಿತಗಿಂತ ಶೇ.30 ಅಧಿ ಕ ಪ್ರಗತಿ ಸಾ ಧಿಸಲಾಗಿದೆ. ಈ ಬಾರಿ ಶೇ.200 ಅಧಿ ಕ ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ. ರೈತರು ಹತ್ತಿರದ ತೋಟಗಾರಿಕೆ ಅಧಿಕಾರಿ, ಸಿಬ್ಬಂದಿ ಸಂಪರ್ಕಿಸಬಹುದು ಎಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಶಿವಯೋಗಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next