Advertisement

ಪೂಂಛ್, ರಜೌರಿಯಲ್ಲಿ 400 ಬಂಕರ್: ಕೇಂದ್ರ ಸರಕಾರ ನಿರ್ಧಾರ

05:15 AM Mar 03, 2019 | Team Udayavani |

ಶ್ರೀನಗರ: ಗಡಿ ಪ್ರದೇಶದಲ್ಲಿ ಪಾಕಿಸ್ಥಾನ ತನ್ನ ಕೃಪಾಪೋಷಿತ ಉಗ್ರರು ಮತ್ತು ಪಾಕ್ ಸೇನೆ  ಭಾರತದ ಮೇಲೆ ನಿರಂತರ ದಾಳಿ ನಡೆಸುತ್ತಿರುವುದರಿಂದ ಭಾರತ ಕಾಶ್ಮೀರದ ಜನರ ಸುರಕ್ಷತೆಯ ದೃಷ್ಟಿಯಿಂದ ಪೂಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಹೆಚ್ಚುವರಿ 400 ಬಂಕರ್ ಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

Advertisement

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಹೆಚ್ಚಿನ ಉಗ್ರಗಾಮಿ ಚಟುವಟಿಕೆಗಳು ನಡೆಯುವುದರಿಂದ ಒಂದು ತಿಂಗಳ ಒಳಗಾಗಿ ಹೆಚ್ಚುವರಿ ಬಂಕರ್ ಗಳನ್ನು ನಿರ್ಮಿಸಲು ಸರಕಾರ ನಿರ್ಧಾರ ಮಾಡಿದೆ. 

ಪಾಕಿಸ್ಥಾನ ಕಳೆದ ಕೆಲವು ದಿನಗಳಲ್ಲಿ ಹಲವು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಮತ್ತು ಪಾಕ್ ನಡುವೆ ನಿರಂತರವಾಗಿ ಗುಂಡಿನ ಸಮರ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರದ ಈ ನಿರ್ಧಾರ ಮಹತ್ವ ಪಡೆದಿದೆ. 

Advertisement

Udayavani is now on Telegram. Click here to join our channel and stay updated with the latest news.

Next