Advertisement

400 ಚೀಲ ಪಡಿತರ ಅಕ್ಕಿ ವಶ: ಇಬ್ಬರ ಬಂಧನ

07:00 AM Nov 05, 2018 | Team Udayavani |

ತೇರದಾಳ: ಪಡಿತರ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ಮಾಲು ಸಮೇತ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ ಘಟನೆ ರಬಕವಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

Advertisement

400 ಮೂಟೆಗಳ 28 ಟನ್‌ನಷ್ಟು ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಜಿಲ್ಲಾ ಅಪರಾಧ ತನಿಖಾ ಸಂಸ್ಥೆ (ಡಿಸಿಐಬಿ) ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ಲಾರಿ ಚಾಲಕ ನಜೀರ್‌ ಅಹ್ಮದ್‌ ಮತ್ತು ಕ್ಲೀನರ್‌ ಇಬ್ರಾಹಿಂ ಸಾಹೇಬ ಬಂಧಿತರು. ರಬಕವಿಯಿಂದ ಹುಬ್ಬಳ್ಳಿ ಕಡೆಗೆ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಆರೋಗ್ಯ ಇಲಾಖೆ ಅಧಿಕಾರಿ ದೇಶಪಾಂಡೆ ಸೇರಿ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತೇರದಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next