Advertisement

ಸದ್ಯದಲ್ಲೇ 4 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ನಾಗೇಶ್‌

08:44 PM Jun 16, 2022 | Team Udayavani |

ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿದ್ದ 30,606 ಅತಿಥಿ ಶಿಕ್ಷಕರ ಪೈಕಿ 22 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ಸದ್ಯದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

Advertisement

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನ ಸಭೆಯ ಬಳಿಕ ಅವರು ಈ ವಿಷಯ ತಿಳಿಸಿದರು.

ಶೇ.70ರಷ್ಟು ಪಠ್ಯಪುಸ್ತಕ ಪೂರೈಕೆ :

ಪಠ್ಯಪುಸ್ತಕ ವಿವಾದದ ನಡುವೆಯೂ ರಾಜ್ಯದಲ್ಲಿ ಶೇ.70 ಪುಸ್ತಕ ಶಾಲೆಗಳಿಗೆ ಪೂರೈಕೆಯಾಗಿದ್ದು, ಉಳಿದ ವುಗಳನ್ನು ಸಾಧ್ಯವಾದಷ್ಟು ಬೇಗ ತಲುಪಿಸಲಾಗುವುದು. ಈ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಆರ್‌. ವಿಶಾಲ್‌, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಪಲ್ಲವಿ ಅಕುರಾತಿ ಉಪಸ್ಥಿತರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next