Advertisement

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 41 ಮಂದಿಗೆ ಸೋಂಕು ದೃಢ: ಇಬ್ಬರು ಸಾವು

05:02 PM Jul 19, 2020 | keerthan |

ಚಿಕ್ಕಮಗಳೂರು: ಜಿಲ್ಲೆಯ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿಂದು 41 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

Advertisement

ಚಿಕ್ಕಮಗಳೂರು ತಾಲೂಕಿನಲ್ಲಿ 18 ಮಂದಿಗೆ ಸೋಂಕು ದೃಢವಾಗಿದ್ದರೆ, ಶೃಂಗೇರಿಯಲ್ಲಿ 11 ಜನರಿಗೆ, ಕೊಪ್ಪ, ಎನ್ಆರ್ ಪುರ , ಕಡೂರು ಮತ್ತು ತರೀಕೆರೆಯಲ್ಲಿ ತಲಾ ಮೂವರಿಗೆ ಕೋವಿಡ್-19 ಸೋಂಕು ಇಂದು ದೃಢವಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸ್ಪಷ್ಟಪಡಿಸಿದೆ.

ಇಂದಿನ 41 ಹೊಸ ಕೋವಿಡ್ ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 291ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಇಬ್ಬರು ಸೋಂಕಿತರು ಮರಣ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 147 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next