Advertisement

ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು

09:08 PM Jul 16, 2020 | Hari Prasad |

ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿಯ ಪ್ರಕಾರ ರಾಜ್ಯದಲ್ಲಿ ಈ 24 ಗಂಟೆಗಳ ಅವಧಿಯಲ್ಲಿ ಒಟ್ಟು 4169 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

Advertisement

ಲಭ್ಯ ವರದಿಗಳ ಪ್ರಕಾರ ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1263 ಕೋವಿಡ್ 19 ಸೋಂಕಿತರು ಚೇತರಿಸಿಕೊಂಡಿರುವುದು ಒಂದು ಆಶಾದಾಯಕ ವಿಚಾರವಾಗಿದೆ. ಇಂದು ರಾಜ್ಯದಲ್ಲಿ ಕೋವಿಡ್ 19 ಸಂಬಂಧಿತ ಒಟ್ಟು 104 ಸಾವು ಸಂಭವಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು, ಇಂದು ಇಲ್ಲಿ 2344 ಸೋಂಕಿತರು ಪತ್ತೆಯಾಗಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ದಕ್ಷಿಣ ಕನ್ನಡ (238), ಧಾರವಾಡ (176), ವಿಜಯಪುರ (144), ಮೈಸೂರು (130), ಕಲಬುರಗಿ (123), ಉಡುಪಿ (113) ಹಾಗೂ ರಾಯಚೂರು (101) ಜಿಲ್ಲೆಗಳಿವೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 104 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಒಟ್ಟು ಸಂಖ್ಯೆ 1032ಕ್ಕೆ ಏರಿಕೆ ಆಗಿದೆ.

ಇದನ್ನೂ ಓದಿ: ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

Advertisement

ಇಂದು ರಾಜ್ಯಾದ್ಯಂತ ಒಟ್ಟು 1263 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 51422 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 19729 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30655 ಇದೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 70 ಸೋಂಕಿತರು ಮೃತಪಟ್ಟಿದ್ದಾರೆ. ಇನ್ನುಳಿದಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 07 ಸೋಂಕಿತರು ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 06 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 05 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ, ಬಳ್ಳಾರಿ ಜಿಲ್ಲೆಯಲ್ಲಿ 04, ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 03, ಬೀದರ್, ಹಾಸನ ಜಿಲ್ಲೆಗಳಲ್ಲಿ ತಲಾ 2 ಕೋವಿಡ್ 19 ಸಂಬಂಧಿ ಸಾವು ಸಂಭವಿಸಿದೆ. ಕಲಬುರಗಿ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವು ಸಂಭವಿಸಿದೆ.

ಇದನ್ನೂ ಓದಿ: ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಈ ಮೂಲಕ ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ ಸಾವಿರದ ಗಡಿ ದಾಟಿದ್ದು ಇಲ್ಲಿಯವರೆಗೆ 1032 ಸಾವು ಸಂಭವಿಸಿದೆ. ಹಾಗೂ 06 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 539 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ತಿರುಪತಿ ತಿರುಮಲ ದೇವಾಲಯದ 15 ಪುರೋಹಿತರಿಗೆ, 91 ಉದ್ಯೋಗಿಗಳಿಗೆ ಕೋವಿಡ್ 19 ದೃಢ

ಬೆಂಗಳೂರು ನಗರ ಜಿಲ್ಲೆಯಲ್ಲಿ 2344 ಪಾಸಿಟಿವ್ ಪ್ರಕರಣ ಸೇರಿದಂತೆ, ದಕ್ಷಿಣ ಕನ್ನಡ – 238, ಧಾರವಾಡ – 176, ವಿಜಯಪುರ 144, ಮೈಸೂರು – 130, ಕಲಬುರಗಿ – 123, ಉಡುಪಿ – 113, ರಾಯಚೂರು – 101 ಜಿಲ್ಲೆಗಳಲ್ಲಿ ಮೂರಂಕಿಯ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದರೆ, ಬೆಳಗಾವಿ – 92, ಉತ್ತರ ಕನ್ನಡ – 79, ಚಿಕ್ಕಬಳ್ಳಾಪುರ – 77, ಬೀದರ್ – 53, ಶಿವಮೊಗ್ಗ – 46, ಬಳ್ಳಾರಿ – 44, ಗದಗ – 44, ಕೋಲಾರ – 43, ಬಾಗಲಕೋಟೆ – 34, ಯಾದಗಿರಿ – 34, ಕೊಪ್ಪಳ – 32, ಹಾಸನ – 31, ಬೆಂಗಳೂರು ಗ್ರಾಮಾಂತರ – 31, ಚಿಕ್ಕಮಗಳೂರು – 30, ದಾವಣಗೆರೆ – 25, ಚಿತ್ರದುರ್ಗ – 21, ಹಾವೇರಿ – 18, ಕೊಡಗು – 18, ಚಾಮರಾಜನಗರ – 16, ತುಮಕೂರು – 12, ಮಂಡ್ಯ – 11 ಸೇರಿದಂತೆ ರಾಜ್ಯದ ಒಟ್ಟು 28 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 23451 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 19347 ವರದಿಗಳು ನೆಗೆಟಿವ್ ಬಂದಿದೆ ಮತ್ತು 4169 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 925477 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 850593 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 51422 ವರದಿಗಳು ಪಾಸಿಟಿವ್ ಆಗಿವೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಪಾಸಿಟಿವ್ ಪ್ರಕರಣ! ಆರು ಮಂದಿ ಸಾವು

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 25288ಕ್ಕೆ ಏರಿಕೆಯಾಗಿದ್ದು, 5952 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 18828ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 507 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2758ಕ್ಕೆ ಏರಿಕೆಯಾಗಿದ್ದು ಇವರಲ್ಲಿ 946 ಸೋಂಕಿತರು ಗುಣಮುಖರಾಗಿದ್ದಾರೆ. 1758 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 52 ಸಾವು ಸಂಭವಿಸಿದೆ.

ಕಲಬುರಗಿಯಲ್ಲಿ ಒಟ್ಟು 2503 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1525 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 940 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 38 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರ‍್ಯಾಂಡಮ್ ಟೆಸ್ಟ್: ಪಡುಬಿದ್ರಿ ಹೋಟೆಲ್ ಮತ್ತು ವ್ಯವಹಾರ ಮಳಿಗೆ ಸಿಬ್ಬಂದಿಗೆ ಸೋಂಕು ದೃಢ

ಉಡುಪಿ ಜಿಲ್ಲೆಯಲ್ಲಿ 1900 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1451 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 446 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 2067 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1147 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 569 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 51 ಸಾವು ಸಂಭವಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ 1535 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1083 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 451 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.

ಬೀದರ್ ಜಿಲ್ಲೆಯಲ್ಲಿ 1191 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 670 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 466 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 53 ಸಾವು ಸಂಭವಿಸಿದೆ.

ಧಾರವಾಡ ಜಿಲ್ಲೆಯಲ್ಲಿ 1574 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 524 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1006 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 44 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 1320 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 531 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 739 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 50 ಸಾವು ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next