Advertisement

ಚಾಮರಾಜನಗರ ಜಿಲ್ಲೆಯಲ್ಲಿ 42 ಮಂದಿಗೆ ಸೋಂಕು ದೃಢ: 6 ಮಂದಿ ಮೈಸೂರು ಜಿಲ್ಲೆಯವರು

07:13 PM Jul 28, 2020 | Hari Prasad |

ಚಾಮರಾಜನಗರ: ಜಿಲ್ಲೆಯಲ್ಲಿ ಇಂದು 42 ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ.

Advertisement

ಇಂದು ಒಟ್ಟು 18 ಮಂದಿ ಕೋವಿಡ್ 19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದೀಗ ಜಿಲ್ಲೆಯಲ್ಲಿ 225 ಸಕ್ರಿಯ ಪ್ರಕರಣಗಳಿವೆ ಮತ್ತು ಇಂದು ದಾಖಲಾಗಿರುವ ಪ್ರಕರಣಗಳಲ್ಲಿ 6 ಮಂದಿ ಹೊರ ಜಿಲ್ಲೆಯವರೂ ಇದ್ದಾರೆ.

ಜಿಲ್ಲೆಯಲ್ಲಿ ಇಂದು ಒಟ್ಟು 700 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು.

ಇಂದಿನ ಪ್ರಕರಣವೂ ಸೇರಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 571 ಪ್ರಕರಣಗಳು ದೃಢಪಟ್ಟಿವೆ. 340 ಮಂದಿ ಗುಣಮುಖರಾಗಿದ್ದಾರೆ. 5 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿಗೆ 5 ಮಂದಿ ಮೃತಪಟ್ಟಿದ್ದಾರೆ.

Advertisement

ಇಂದು ಕೊಳ್ಳೇಗಾಲ ತಾಲೂಕಿನ 14, ಯಳಂದೂರು ತಾಲೂಕಿನ 10, ಗುಂಡ್ಲುಪೇಟೆ ತಾಲೂಕಿನ 8, ಚಾಮರಾಜನಗರ ತಾಲೂಕಿನ 4 ಮಂದಿಗೆ ಸೋಂಕು ದೃಢಪಟ್ಟಿದೆ. ಮೈಸೂರು ಜಿಲ್ಲೆಯ ಮೂಗೂರು, ಗಟ್ಟವಾಡಿ, ತಿ. ನರಸೀಪುರ, ಪಡುವಾರಹಳ್ಳಿಯ ತಲಾ ಓರ್ವರಿಗೆ ಹಾಗೂ ನಾಯ್ಡುನಗರದ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next