Advertisement

ಚಿಕ್ಕಮಗಳೂರು: 42 ಮಂದಿಗೆ ಸೋಂಕು ದೃಢ, 62 ಮಂದಿ ಆಸ್ಪತ್ರೆಯಿಂದ ಬಿಡುಗಡೆ

05:09 PM Jul 25, 2020 | keerthan |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿಂದು 42 ಮಂದಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಅದಲ್ಲದೆ 62 ಮಂದಿ ಸೋಂಕಿತರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement

ಜಿಲ್ಲೆಯಲ್ಲಿಂದು 42 ಮಂದಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಚಿಕ್ಕಮಗಳೂರಿನಲ್ಲಿ ಅತೀ ಹೆಚ್ಚು ಅಂದರೆ 21 ಜನರಿಗೆ ಸೋಂಕು ದೃಢವಾಗಿದೆ. ಕಡೂರಿನಲ್ಲಿ 15 ಮಂದಿಗೆ, ತರೀಕೆರೆಯಲ್ಲಿ ನಾಲ್ವರಿಗೆ ಹಾಗೂ ಎನ್ಆರ್ ಪುರದಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ದೃಢವಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಇಂದು 62 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ಕೋವಿಡ್ ಸೋಂಕಿನಿಂದ ಜಿಲ್ಲೆಯಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 223 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next