Advertisement

Bhagawan ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 42ನೇ  ವರ್ಧಂತ್ಯುತ್ಸವ, ಪಾದಾಭಿಷೇಕ

01:28 PM Feb 02, 2024 | Team Udayavani |

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ  ಪ್ರತಿಷ್ಠಾ ಮಹೋತ್ಸವದ 42ನೇ ವರ್ಧಂತ್ಯುತ್ಸವದ ಅಂಗವಾಗಿ ಫೆ.2ರ ಶುಕ್ರವಾರ ಪಾದಾಭಿಷೇಕ ನೆರವೇರಿತು.

Advertisement

ಗುರುವಾರ ತೋರಣ ಮುಹೂರ್ತ, ವಿಮಾನ ಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಪೂಜ್ಯ ದಿವ್ಯಸಾಗರ ಮುನಿಮಹಾರಾಜರು, ಪೂಜ್ಯ ಆದಿಸಾಗರ ಮುನಿ ಮಹಾರಾಜರು, ಪೂಜ್ಯ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement

ಶುಕ್ರವಾರ ಬೆಳಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆದು ಬಳಿಕ ಎಳನೀರು, ಇಕ್ಷುರಸ ಹಾಲು, ಕಲ್ಕಚೂರ್ಣ ಅಭಿಷೇಕ,(ಅಕ್ಕಿ ಹಿಟ್ಟು), ಅರಶಿನ, ಚತುಷ್ಕೋನ ಕುಂಭಾಬಿಷೇಕ, ಅಷ್ಟಗಂಧದ ಅಭಿಷೇಕ, ಶ್ರೀಗಂಧದ ಅಭಿಷೇಕ, ಚಂದನದ ಅಭಿಷೇಕ, ಪೂರ್ಣಕುಂಭಾಭಿಷೇಕ, ಮಂಗಳಾರತಿ, ಮಹಾಶಾಂತಿಮಂತ್ರ ನೆರವೇರಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next