Advertisement

Bihar; ಘೋರ ದುರಂತಗಳು: ಪವಿತ್ರ ಸ್ನಾನಕ್ಕೆ ತೆರಳಿದ 43 ಮಂದಿ ನೀರುಪಾಲು!!

05:55 PM Sep 26, 2024 | Team Udayavani |

ಪಾಟ್ನಾ:ಬಿಹಾರದಲ್ಲಿ ‘ಜೀವಿತ್ ಪುತ್ರಿಕಾ’ ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿದಂತೆ ಕನಿಷ್ಠ 43 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸ ರಕಾರ ಗುರುವಾರ(ಸೆ26) ತಿಳಿಸಿದೆ. ಬುಧವಾರ ನಡೆದ ಉತ್ಸವದಲ್ಲಿ ಬಿಹಾರದ 15 ಜಿಲ್ಲೆಗಳಲ್ಲಿ ಈ ದುರ್ಘಟನೆಗಳು ಸಂಭವಿಸಿವೆ.

Advertisement

ಪೂರ್ವ ಮತ್ತು ಪಶ್ಚಿಮ ಚಂಪಾರಣ್, ನಳಂದಾ, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್‌ಪುರ, ಸಮಸ್ತಿಪುರ್, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ನೀರುಪಾಲಾದ ಘಟನೆಗಳು ವರದಿಯಾಗಿವೆ.

ಇಲ್ಲಿಯವರೆಗೆ ಒಟ್ಟು 43 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

‘ಜೀವಿತ್ ಪುತ್ರಿಕಾ’ ಹಬ್ಬದ ಸಮಯದಲ್ಲಿ, ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡಿ ಪವಿತ್ರ ಸ್ನಾನ ಮಾಡುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next