Advertisement

45 ಕ್ವಿಂಟಲ್‌ ಅನ್ನಭಾಗ್ಯ ಅಕ್ಕಿ ವಶ

03:45 AM Jul 03, 2017 | Team Udayavani |

ಸಿಂಧನೂರು: ತಾಲೂಕಿನ ಉಮಲೂಟಿ ಗ್ರಾಮದ ಹೊರವಲಯದ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಯೋಜನೆಯ 45 ಕ್ವಿಂಟಲ್‌ ಅಕ್ಕಿಯನ್ನು ಶಿರಸ್ತೇದಾರ ಬಸವರಾಜ ನೇತೃತ್ವದಲ್ಲಿ ದಾಳಿ
ಮಾಡಿ ವಶಪಡಿಸಿಕೊಳ್ಳಲಾಗಿದ್ದು, ತೋಟದ ಮಾಲೀಕನ ಮೇಲೆ ತುರ್ವಿಹಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ. 

Advertisement

ಅನ್ನಭಾಗ್ಯ ಯೋಜನೆಯ ಸುಮಾರು 60ಕ್ಕೂ ಅಧಿಕ ಅಕ್ಕಿ ಚೀಲಗಳನ್ನು ಉಮಲೂಟಿ ಗ್ರಾಮದ ನವೀನ ಎನ್ನುವವರಿಗೆ ಸೇರಿದ ಹೊಲದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ 45 ಕ್ವಿಂಟಲ್‌ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next