Advertisement

25 ವರ್ಷದ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಪ್ಪ ಆತ್ಮಹತ್ಯೆ: ಡೆತ್ ನೋಟ್ ಪತ್ತೆ

10:35 AM Mar 29, 2022 | Team Udayavani |

ತುಮಕೂರು: 25 ವರ್ಷದ ಯುವತಿ ಜೊತೆ ಮದುವೆಯಾಗಿ ಭಾರಿ ಸುದ್ದಿಯಾಗಿದ್ದ 45 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ನಡೆದಿದೆ.

Advertisement

ಶಂಕರಪ್ಪ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಕಳೆದ ಐದು ತಿಂಗಳ ಹಿಂದೆ ಮೇಘನಾ (25) ಜೊತೆ ಮದುವೆಯಾಗಿದ್ದರು. ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರು ದಿನಗಳಿಂದ ಗಂಡ ಹೆಂಡತಿ ಜೊತೆ ಜಗಳ ನಡೆಯುತಿತ್ತು. ಶಂಕರಪ್ಪ ಸೋಮವಾರ ಮನೆ ಬಿಟ್ಟು ಹೋಗಿದ್ದರು ಹೋಗಿದ್ದು, ಇಂದು ಮುಂಜಾನೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ.

ಇದನ್ನೂ ಓದಿ:ಕ್ರಿಪ್ಟೋ-ಬಿಟ್‌ ಕಾಯಿನ್‌ ಸೋಗಿನ ವಂಚನೆ: ರಾಯಬಾಗದ ಇಬ್ಬ ರ ಸೆರೆ

Advertisement

ಮೇಘನಾ ಸ್ವತಃ ಶಂಕರಪ್ಪ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದರು. ಈ ವೇಳೆ ಮದುವೆಯಾಗದ ಶಂಕರಪ್ಪ ಯುವತಿಯನ್ನು ಒಪ್ಪಿ ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು. ಇಬ್ಬರು ಮದುವೆಯಾಗಿರುವ ಫೋಟೋ ನೋಡಿ ಟ್ರೋಲಿಗರು ಟ್ರೋಲ್ ಮಾಡಿದ್ದರು. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next