Advertisement
ಸಾತನೂರು ವಿಧಾನಸಭಾ ಕ್ಷೇತ್ರದಿಂದ 4 ಮತ್ತು ಕನಕಪುರ ಕ್ಷೇತ್ರದಿಂದ ಮೂರನೇ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. ಇದೀಗ 4ನೇ ಬಾರಿಗೆ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂತ್ರಿಮಂಡಲದಲ್ಲಿ ಇಂಧನ ಸಚಿವರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್, ಎಸ್. ಬಂಗಾರಪ್ಪ , ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿಯೂ ಸಚಿವರಾಗಿ ಬಂಧಿಖಾನೆ, ಸಹಕಾರ ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು. ಡಿ.ಕೆ.ಶಿ ಅವರಿಗೆ ಈ ಬಾರಿಯೂ ಇಂಧನ ಖಾತೆ ಸಿಗಲಿದೆ ಎಂಬ ವಿಶ್ವಾಸ ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ.
Related Articles
ಸಚಿವರಾಗಿ ಬಂಧಿಖಾನೆ ಖಾತೆಯನ್ನು ನಿರ್ವಹಿಸಿದ್ದರು. 1994ರಲ್ಲಿ ಪಕ್ಷೇತರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999ರಲ್ಲಿ ಎಚ್ .ಡಿ.ಕುಮಾರಸ್ವಾಮಿ ಅವರ ವಿರುದ್ಧವೂ ಗೆಲವು ಸಾಧಿಸಿದ್ದರು. 2004ರಲ್ಲಿ ಜೆಡಿಎಸ್ ಅಭ್ಯರ್ಥಿ ಡಿ.ಎಂ. ವಿಶ್ವನಾಥ್ ವಿರುದ್ದ ಗೆದಿದ್ದರು.
Advertisement
ವಿಧಾನಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಾಗಿದ್ದರಿಂದ ಸಾತನೂರು ಕ್ಷೇತ್ರ ಅಳಿಸಿ ಹೋಯಿತು. ತದನಂತರ ಅವರು ಕನಕಪುರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. 2008ರಲ್ಲಿ ಮತ್ತೆ ಜೆಡಿಎಸ್ ಅಭ್ಯರ್ಥಿ ಡಿ.ಎಂ.ವಿಶ್ವನಾಥ್ ವಿರುದ್ಧ, 2013ರಲ್ಲಿ ಪಿ.ಜಿ.ಆರ್ ಸಿಂಧ್ಯಾ ವಿರುದ್ಧ ಸ್ಪರ್ಧಿಸಿ ಗೆದ್ದರು. ಇದೀಗ ಮೇ 12, 2018ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾರಾಯಣ ಗೌಡರ ವಿರುದ್ಧ 79909 ಮತಗಳ ಅಂತರದಿಂದ ಗೆದ್ದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸೇವೆ : 2001ರಲ್ಲಿ ಎಐಸಿಸಿಯ ಸದಸ್ಯರಾಗಿದ್ದ ಡಿ.ಕೆ.ಶಿವಕುಮಾರ್ 1985 ರಿಂದ 2001ರವರೆಗೆ ಕೆಪಿಸಿಸಿ ಕಾರ್ಯದರ್ಶಿಯಾಗಿದ್ದರು. 2013ರ ಚುನಾವಣೆಯಲ್ಲಿ ಚುನಾವಣಾ ಪ್ರಚಾರ ಸಮಿತಿಯ ಸಹ ಅಧ್ಯಕ್ಷರಾಗಿದ್ದರು. 2018ರ ವಿಧಾನಸಭೆ ಚುನಾವಣೆಗೆ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಕನಕಪುರದಲ್ಲಿ ಅಭಿವೃದ್ಧಿ ಪರ್ವ ನಿರಂತರಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಡಿ.ಕೆ. ಶಿವಕುಮಾರ್, ಇಂಧನ ಕ್ಷೇತ್ರದಲ್ಲಿ ಬದಲಾವಣೆಗೆ ಕಾರಣರಾಗಿದ್ದಾರೆ ಎಂಬುದು ಸಾಮಾನ್ಯ ನಾಗರಿಕರ ಅಭಿಪ್ರಾಯ. ತಲಾ ಇಬ್ಬರು ರೈತರಿಗೆ ಎಚ್.ವಿ.ಡಿ.ಎಸ್. ಯೋಜನೆಯಡಿಯಲ್ಲಿ ಉಚಿತ ಟ್ರಾನ್ಸ್ ಫಾರ್ಮರ್ ನೀಡಿರುವುದು ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ. ಸೂರ್ಯ ರೈತ ಯೋಜನೆ, ಸೋಲಾರ್ ಮೂಲಕ ವಿದ್ಯುತ್ ಉತ್ಪಾದನೆಗಳ ಬಗ್ಗೆ ಜನಮೆಚ್ಚುಗೆ ಇದೆ. ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿ ಇರುವ ಕನಕಪುರದಲ್ಲಿ ಡಿ.ಕೆ.ಶಿ ತಾಲೂಕು ಕಚೇರಿಗೆ ನೂತನ ಕಟ್ಟಡ, ಅಂಬೇಡ್ಕರ್ ಭವನ, ನೂತನ ಬಸ್ ನಿಲ್ದಾಣ, ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳ ವೃದ್ಧಿಗೆ ಕಾರಣರಾಗಿದ್ಧಾರೆ. ಮಿನಿವಿಧಾನಸೌಧ, .ಕೆ.ಎಂ.ಎಫ್ ಮೆಗಾಡೇರಿ, ಅಂಬೇಡ್ಕರ್ ಭವನ ಸೇರಿದಂತೆ ನೂತನ ಸರ್ಕಾರಿ ಕಟ್ಟಡಗಳು, ರಸ್ತೆ, ಇಲಾಖೆಗಳ ಕಟ್ಟಡ, ಶಾಲಾ-ಕಾಲೇಜುಗಳ ಕಟ್ಟಡ, ಅಭಿವೃದ್ಧಿಯಲ್ಲಿ ಊಹಿಸಲಾಗದ ಸಾಧನೆ ಮಾಡಿರುವ
ಶಿವಕುಮಾರ್, ಇದೀಗ 4ನೇ ಬಾರಿ ಸಚಿವರಾಗಿರುವುದು ಜಿಲ್ಲೆಯ ಜನರಲ್ಲಿ ಹರ್ಷ ಮೂಡಿಸಿದೆ.