Advertisement

ರಾ.ಹೆ ಚತುಷ್ಪಥ ಯೋಜನೆ ಜಿಲ್ಲೆಯಲ್ಲಿ ಶೇ. 70 ಭೂ ಸ್ವಾಧೀನ ಪೂರ್ಣ

11:57 AM May 10, 2017 | Team Udayavani |

ಕಾಸರಗೋಡು: ರಾಜ್ಯದ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸುವ ಯೋಜನೆಗೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಶೇ. 70ರಷ್ಟು ಭೂಸ್ವಾಧೀನಪಡಿಸಲಾಗಿದೆ ಎಂದು ರಾಜ್ಯ ಲೋಕೋಪಯೋಗಿ ಖಾತೆ ಸಚಿವ ಜಿ. ಸುಧಾಕರನ್‌ ತಿಳಿಸಿದ್ದಾರೆ.

Advertisement

ರಾಷ್ಟ್ರೀಯ ಹೆದ್ದಾರಿ ಹಾದುಹೋಗುತ್ತಿರುವ ದಾರಿ ಮಧ್ಯೆ ಇರುವ ಸೇತುವೆ ಮತ್ತು ರೈಲ್ವೇ ಮೇಲ್ಸೇತುವೆಗಳನ್ನು ಅಗಲಗೊಳಿಸಲಾಗುವುದು. ಇದರಂತೆ ಕೋಟಿಕುಳಂ ಮತ್ತು ಪಳ್ಳಿಕೆರೆ ಮೇಲ್ಸೇತುವೆಯನ್ನು ಚತುಷ್ಪಥಗೊಳಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಉಳಿದೆಡೆ ಅಗತ್ಯದ ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಭೂಸಾರಿಗೆ ಇಲಾಖೆಯ ಆರ್ಥಿಕ ನೆರವಿನಿಂದ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸಲಾಗುತ್ತದೆ. ಇದಕ್ಕಾಗಿ ಕೇಂದ್ರ ಸರಕಾರ 675 ಕೋಟಿ ರೂಪಾಯಿ ಮಂಜೂರು ಮಾಡಿದೆ. ಮೊದಲ ಹಂತದಲ್ಲಿ ತಲಪ್ಪಾಡಿಯಿಂದ ಕಣ್ಣೂರು ತನಕ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲಾಗುವುದು. ನಿರ್ಮಾಣ ಕೆಲಸಕ್ಕೆ ಜೂನ್‌ ತಿಂಗಳಲ್ಲಿ ಚಾಲನೆ ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಸ್ವಾಧೀನಪಡಿಸುವ ಜಮೀನಿಗೆ ನ್ಯಾಯವಾದ ಬೆಲೆ ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next