Advertisement

5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

12:14 AM Mar 07, 2021 | Team Udayavani |

ರಾಮನಗರ : ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣದಲ್ಲಿ 5 ಕೋ. ರೂ. ಡೀಲ್‌ ನಡೆದಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಪ್ರತಿಕ್ರಿಯಿಸಿದ್ದು, ಆ ಡೀಲ್‌ ಎಲ್ಲಿ, ಹೇಗೆ ನಡೆಯಿತು? ಯಾರ ಮೂಲಕ, ಯಾರಿಗೆ ಹಣ ತಲುಪಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

Advertisement

ಕನಕಪುರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮಲ್ಲಿರುವ ಮಾಹಿತಿಯನ್ನು ಸಂಬಂಧಿಸಿದ ಸರಕಾರಿ ಅಧಿಕಾರಿಗಳು ಮತ್ತು ಮಾಧ್ಯಮಗಳಿಗೆ ಹಂಚಿಕೊಳ್ಳಬೇಕು ಎಂದರು.

6 ಸಚಿವರ ಅಕ್ರಮದ ಬಗ್ಗೆ ದಾಖಲೆಯಿದೆ
ಆರು ಮಂದಿ ಸಚಿವರು ಯಾವ ಕಾರಣಕ್ಕೆ ಕೋರ್ಟ್‌ ಮೊರೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ, ಅವರೆಲ್ಲರ ಅಕ್ರಮದ ದಾಖಲೆಗಳನ್ನು ಕಾನೂನಾತ್ಮಕವಾಗಿ ವಕೀಲರೊಂದಿಗೆ ಚರ್ಚಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next