Advertisement

ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ : ಕಂಬಕ್ಕೆ ಕಾರು ಢಿಕ್ಕಿ ಹೊಡೆದು 5 ಮಂದಿ ಸಾವು

03:25 PM Sep 11, 2022 | Team Udayavani |

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಕಾರೊಂದು ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಮೃತರನ್ನು ಉನಾ ಜಿಲ್ಲೆಯ ರಾಜನ್ ಜಸ್ವಾಲ್, ಅಮಲ್, ಕಾರು ಚಾಲಕ ಹರಿಯಾಣದ ಮಜ್ರಾದ ವಿಶಾಲ್ ಚೌಧರಿ, ಪಂಜಾಬ್‌ನ ಹಾಜಿಪುರದ ಸಿಮ್ರಂಜೀತ್ ಸಿಂಗ್ ಮತ್ತು ಹಿಮಾಚಲದ ಝಲೇಡಾದ ಅನುಪ್ ಸಿಂಗ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಶನಿವಾರ ರಾತ್ರಿ ಸಂತೋಷಗಢದಿಂದ ಉನಾಗೆ ಹೋಗುತ್ತಿದ್ದ ಪಂಜಾಬ್ ರಾಜ್ಯದ ನಂಬರ್ ಪ್ಲೇಟ್ ಹೊಂದಿರುವ ಕಾರು ಕುಥಾರ್ ಕಲಾನ್‌ ಬಳಿ ತಲುಪುತಿದ್ದಂತೆ ರಸ್ತೆ ಬದಿಯಲ್ಲಿರುವ ಕಂಬಕ್ಕೆ ಢಿಕ್ಕಿ ಹೊಡೆದು ಹೊಲಕ್ಕೆ ಉರುಳಿ ಬಿದ್ದಿದೆ ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಗಂಭೀರ ಗಾಯಗೊಂಡ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದವರನ್ನು ಹೊರಎಳೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆ ಕುರಿತು ಉನಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ : ಚಿಕ್ಕಬಳ್ಳಾಪುರ: ಒಂದು ತಿಂಗಳಿನಿಂದ ತೇಕಲಾಹಳ್ಳಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Advertisement

Udayavani is now on Telegram. Click here to join our channel and stay updated with the latest news.

Next