Advertisement

5 ಕಿಮೀ ವ್ಯಾಪ್ತಿ ಪ್ರದೇಶ ಬಫರ್‌ ಝೋನ್‌: ಡಿಸಿ ಹಿರೇಮಠ

05:57 PM Apr 20, 2020 | Suhan S |

ಗದಗ: ಜಿಲ್ಲೆಯ ಗದಗ- ಬೆಟಗೇರಿ ನಗರಸಭೆಯ ವಾರ್ಡ್‌ 31 ರ ರಂಗನವಾಡ ಓಣಿ, ದತ್ತಾತ್ರೇಯ ಗುಡಿ, ಉರ್ದು ಶಾಲೆ ಹಾಗೂ ಎಸ್‌. ಎಂ.ಕೆ ನಗರದ ಸುತ್ತಲಿನ 100 ಮೀ ಪ್ರದೇಶವನ್ನು ಕೊವಿಡ್‌-19 ತಡೆಗಟ್ಟುವ ಕ್ರಮವಾಗಿ ತಕ್ಷಣದಿಂದ ಮುಂದಿನ ಆದೇಶದವರೆಗೆ ನಿಯಂತ್ರಿತ (ಕಂಟೇನ್ಮೆಂಟ್‌) ಪ್ರದೇಶವೆಂದು ಮತ್ತು ಕಂಟೈನ್‌ಮೆಂಟ್‌ ಪ್ರದೇಶದ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ ವ್ಯಾಪ್ತಿಯ ಸುತ್ತಳತೆಯ ಪ್ರದೇಶವನ್ನು ಬಫರ್‌ ಝೋನ್‌ ಎಂದು ಘೋಷಿಸಿ, ಗದಗ ಉಪ ವಿಭಾಗೀಯ ದಂಡಾಧಿಕಾರಿಗಳನ್ನು ಇನ್ಸಿಂಡೆಂಟ್‌ ಕಮಾಂಡರ್‌ ಎಂದು ನೇಮಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೌತಿಕ ನಿಬಂಧನೆಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

Advertisement

ನಿಯಂತ್ರಿತ ಪ್ರದೇಶದಿಂದ ಇತರೆ ಪ್ರದೇಶಗಳಿಗೆ ಕರ್ತವ್ಯ ನಿರತ ಅಧಿಕಾರಿ ಸಿಬ್ಬಂದಿ ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿ ಸಿದೆ. ಕಂಟೈನ್‌ಮೆಂಟ್‌ ಝೋನ್‌ ಸುತ್ತ ಘೋಷಣೆ ಮಾಡಲಾದ 5 ಕಿ.ಮಿ ಬಫರ್‌ ಝೋನ್‌ ಮೊದಲ 1 ಕಿ.ಮೀ ಸುತ್ತಳತೆಯ ವ್ಯಾಪ್ತಿಯಲ್ಲಿ ಮನೆ-ಮನೆಗೆ ತೀವ್ರ ತೆರನಾದ ಆರೋಗ್ಯ ಪರೀಕ್ಷೆಗಳು ಕಡ್ಡಾಯವಾಗಿ ನಡೆಯತಕ್ಕದ್ದು. ನಿಯಂತ್ರಿತ ವಲಯಗಳಲ್ಲಿ ಎಲ್ಲ ದಿನಸಿ ಅಂಗಡಿಗಳು, ಹಾಲಿನ ಅಂಗಡಿಗಳು, ಮಾಂಸ, ಔಷಧ ಸೇರಿದಂತೆ ಎಲ್ಲ ಅಂಗಡಿಗಳನ್ನು ಕಡ್ಡಾಯವಾಗಿ ಬಂದ್‌ ಮಾಡುವುದು. ನಿಯಂತ್ರಿತ ವ್ಯಾಪ್ತಿ ಪ್ರದೇಶಗಳಲ್ಲಿ ಧಾರ್ಮಿಕ ಉರುಸು, ಜಾತ್ರೆ, ಮೆರವಣಿಗೆ, ಜನ ಗುಂಪು ಸೇರುವಿಕೆ, ಸಭೆ ಅಥವಾ ಮದುವೆ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಆದೇಶವನ್ನು ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ- 2005 ರನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next