Advertisement

ಗುರುಪುರ ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು ಪ್ರಕರಣ: ತಲಾ 5 ಲಕ್ಷ  ರೂ. ಪರಿಹಾತ ವಿತರಣೆ

12:31 PM Jul 06, 2020 | keerthan |

ಮಂಗಳೂರು: ಇಲ್ಲಿನ ಗುರುಪುರ ಬಂಗ್ಲೆಗುಡ್ಡೆ ಎಂಬಲ್ಲಿ ರವಿವಾರ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದ ಇಬ್ಬರು ಮಕ್ಕಳ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗಿದೆ.

Advertisement

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಿನ್ನೆ ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರು. ಮೃತಪಟ್ಟ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದರು.

ಇಂದು ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು. ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಈ ಸಂದರ್ಭದಲ್ಲಿ ಇದ್ದರು.

ಗುರುಪುರ ಬಂಗ್ಲೆಗುಡ್ಡೆಯ ಬಳಿ ಗುಡ್ಡ ಕುಸಿದು ಸುಮಾರು ನಾಲ್ಕು ಮನೆಗಳಿಗೆ ಹಾನಿಯಾಗಿತ್ತು. ಘಟನೆಯಲ್ಲಿ 16 ವರ್ಷದ ಸಫ್ವಾನ್ ಮತ್ತು 10 ವರ್ಷದ ಸಹಲಾ ಮೃತಪಟ್ಟಿದ್ದರು. ಸುಮಾರು ಐದು ಗಂಟೆಗಳ ಕಾರ್ಯಾಚರಣೆಯ ನಂತರ ಎನ್ ಡಿಆರ್ ಎಫ್ ಪಡೆ ಮಣ್ಣಿನಡಿಯಿಂದ ಇಬ್ಬರು ಮಕ್ಕಳ ಮೃತದೇಹವನ್ನು ಹೊರತೆಗೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next