Advertisement

ಲಾರಿಯಲ್ಲಿ 5 ಲಕ್ಷ ಮೌಲ್ಯದ ಅಫೀಮು ಸಾಗಾಟ: ಚಾಲಕನನ್ನು ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು

08:07 PM Oct 09, 2020 | Mithun PG |

ವಿಜಯಪುರ: ಜಿಲ್ಲೆಯ ಅಬಕಾರಿ ಅಧಿಕಾರಿಗಳು ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಅಫೀಮು ಸಾಗಿಸುತ್ತಿದ್ದ ಲಾರಿಯನ್ನು ತಡೆದು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಖಚಿತ ಮಾಹಿತಿ ಮೇರೆಗೆ ದ್ವಿಚಕ್ರ ವಾಹನಗಳ ಬಿಡಿಭಾಗಗಳನ್ನು ಹೊತ್ತು ರಾಜಸ್ಥಾನದಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿಯನ್ನು ಚಡಚಣ ತಾಲೂಕಿನ ಶಿರಾಡೂಣ ಬಳಿ ತಡೆದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರಿಶೀಲಿಸಿದಾಗ ಲಾರಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 12.05 ಕೆ.ಜಿ ತೂಕದ ಅಫೀಮು ಹಾಗೂ 30 ಲಕ್ಷ ರೂ. ಮೌಲ್ಯದ ಲಾರಿಯನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ಚಾಲಕನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ವಿಜಯಪುರ ಅಬಕಾರಿ ಆಯುಕ್ತ ಅರುಣ ಕಮ್ಮಾರ ಅವರ ನೇತೃತ್ವದಲ್ಲಿ ಚಡಚಣ ಶಾಖೆಯ ಅಬಕಾರಿ ಪಿ.ಎಸ್.ಐ ಸದಾಶಿವ ಕೊರ್ತಿ, ಅಬಕಾರಿ ಅಧಿಕಾರಿ ಪಡಲಸಗಿ, ಗಾರ್ಡಗಳಾದ ಅಶೋಕ ಬಿರಾದಾರ, ಎ.ಎಸ್.ಗೊಣಸಗಿ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು ಎಂದು ಅಬಕಾರಿ ಜಂಟಿ ಆಯುಕ್ತರಾದ ಡಾ.ವೈ.ಮಂಜುನಾಥ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next