Advertisement

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

02:06 PM Jun 01, 2022 | Team Udayavani |

ಬೀದರ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೀದರನ ಎಂಟು ಜನರ ಸಾವಿನ ಘಟನೆಯಿಂದ ಸರ್ಕಾರಕ್ಕೆ ನೋವುಂಟಾಗಿದ್ದು, ಮೃತ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೋಪ್ಪ ಹೇಳಿದರು.

Advertisement

ಮಂಗಳವಾರ ಮೃತ ಕುಟುಂಬಗಳ ಮನೆಗೆ ಭೇಟಿ ನೀಡಿ, ಸದಸ್ಯರಿಗೆ ಸಾತ್ವಾನ ಹೇಳಿದ ಅವರು, ತಾವು ಯಾವುದೇ ಕಾರಣಕ್ಕೆ ಎದೆಗುಂದಬೇಡಿ. ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಿಮ್ಮೊಂದಿಗೆ ಇದೆ. ತಮ್ಮ ಯಾವುದೇ ಸಮಸ್ಯೆ ಇದ್ದರೆ ನಮ್ಮ ಗಮನಕ್ಕೆ ತನ್ನಿ. ಈ ಆಕಸ್ಮಿಕ ಸಾವು ನಿಮಗೆ ಮಾತ್ರವಲ್ಲ, ನಮ್ಮೆಲ್ಲರಿಗೂ ಬಹಳ ನೋವುಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಹೋದ ಜೀವ ತಂದು ಕೊಡುವುದಕ್ಕೆ ನಮಗೆ ಯಾರಿಂದಲೂ ಆಗಲ್ಲ. ಆದರೆ, ಜೀವ ಕಳೆದುಕೊಂಡ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡುವುದರ ಜೊತೆಗೆ ಅವರೊಂದಿಗೆ ನಾವೆಲ್ಲರೂ ಇದ್ದೇವೆ. ಆ ಭಗವಂತ ಮೃತ ಕುಟುಂಬಗಳಿಗೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಹೇಳಿದರು.

ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಎಸ್‌ಪಿ ಕಿಶೋರ ಬಾಬು, ಜಿ.ಪಂ ಮಾಜಿ ಸದಸ್ಯೆ ಶಕುಂತಲಾ ಬೆಲ್ದಾಳೆ, ತಹಶೀಲ್ದಾರ್‌ ಅಣ್ಣಾರಾವ್‌ ಪಾಟೀಲ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next